ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದಿಂದ ನವೆಂಬರ್ 05 ರಂದು ಬೃಹತ್ ಪ್ರತಿಭಟನೆ ಸಾಧ್ಯತೆ!

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ.

ಲಾಕ್ ಡೌನ್ ಬಳಿಕ ಸಾರಿಗೆ ನೌಕರರು ಕರ್ತವ್ಯಕ್ಕೆ ವಾಪಸ್ ಆಗಿದ್ದು ಪರಿಪೂರ್ಣ ಪ್ರಮಾಣದ ಕೆಲಸ ಅವರಿಗೆ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಬೇಕಾದರೆ ಘಟಕದ ಅಧಿಕಾರಿಗಳಿಗೆ ಲಂಚ ನೀಡಬೇಕು ಎಂದು ನೌಕರರು ಆರೋಪಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡುವುದಕ್ಕೆ ನೌಕರರ ರಜೆ ಕಡಿತಗೊಳಿಸಲಾಗಿದೆ. ಹಲವು ಭತ್ಯೆಗಳನ್ನು ರದ್ದು ಮಾಡಲಾಗಿದೆ ಎಂದು ನೌಕರರು ಆರೋಪ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಸಾರಿಗೆ ನೌಕರರು ಮೃತಪಟ್ಟರೆ 30 ಲಕ್ಷ ರೂ. ನೀಡುವುದಾಗಿ ಈ ಹಿಂದೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದರು. ಇದುವರೆಗೆ ಅದನ್ನು ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೌಕರರು ದೂರಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

Spread the love
  • Related Posts

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…

    Spread the love

    You Missed

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 55 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 33 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 34 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 92 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 22 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    • By admin
    • May 7, 2026
    • 10 views
    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???