ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಆದಿಚುಂಚನಗಿರಿ ಮಠ ಮಾನ್ಯವಾಗಿಸಿಕೊಂಡು ದ.ಕ.ಜಿಲ್ಲಾ ಗೌಡರ ಸಂಘದಡಿ ತಾಲೂಕಿಗೆ ಒಳಪಟ್ಟು ಎಲ್ಲ ಭಾಷೆ ಮಾತಾಡುವ ಗೌಡ ಸಮುದಾಯ ಸೇರಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಸ್ಥಾಪಿಸಿರುವುದು ಉತ್ತಮ‌ಬೆಳವಣಿಗೆ ಎಂದು ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ಬಿ.ಬಾಲಕೃಷ್ಣ ಗೌಡ ಹೇಳಿದರು.

ನೂತನವಾಗಿ ಅಸ್ತಿತ್ವಕ್ಕೆ ಬಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಸೆ.23 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆದ ಸದಸ್ಯತ್ವ ಅಭಿಯಾನ ಸಭೆ ಉದ್ಘಾಟಿಸಿ ಮಾತನಾಡಿದರು.

ಗೌಡ ಸಮುದಾಯದಡಿ ಬೇರೆ ಬೇರೆ ಆಚಾರ ವಿಚಾರ ಕಟ್ಟುಪಾಡು ಇರಬಹುದು, ಆದರೆ ಎಲ್ಲರ ಅಭಿವೃದ್ಧಿಗೆ ಹುಟ್ಟು ಹಾಕಿದ ಟ್ರಸ್ಟ್ ಈ ಹಿಂದೆಯೇ ಸ್ಥಾಪಿತವಾಗಬೇಕಿತ್ತು. ನೂತನ ಟ್ರಸ್ಟ್ ನಿಂತ ನೀರಾಗದೆ
ಸಮಾಜದ ಅಗತ್ಯತೆ ಪೂರೈಸುತ್ತ ಹರಿವ ನೀರಂತಾಗಬೇಕು. ಟ್ರಸ್ಟ್ ನಿಂದ ಗ್ರಾಮ ಗ್ರಾಮಗಳ ಅರ್ಹ ಬಡವನ ಮನೆಗೆ ನೆರವು ತಲುಪುವ ಕಾರ್ಯವಾಗಬೇಕು ಎಂದು ಆಶಿಸಿದರು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ ಮಾತನಾಡಿ, ಆದಿಚುಂಚನಗಿರಿ ಸ್ವಾಮಿಗಳ ಆಶಯದಂತೆ ದ.ಕ.ಜಿಲ್ಲೆಯಲ್ಲಿ ಎಲ್ಲ ಒಕ್ಕಲಿಗ ಗೌಡ ಸಮುದಾಯ ಒಟ್ಟಾಗಿ ಸಾಗಬೇಕೆಂಬ ನೆಲೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ರಚಿಸಿದೆ. ಗೌಡರ ಸಮುದಾಯ ಒಟ್ಟಾದರೆ ತಾಲೂಕಿನಲ್ಲಿ 60 ರಿಂದ 70 ಸಾವಿರ ಮಂದಿಯಿದ್ದೇವೆ. ಒಕ್ಕಲಿಗ ಸಮುದಾಯ ಆದಿಚುಂಚನಗಿರಿ ಮಠದಂತ ಶ್ರೇಷ್ಠ ಮಠದ ಪರಂಪರೆಯಡಿ ನಾವೆಲ್ಲ ಮುಂದೆ ಟ್ರಸ್ಟ್ ಮೂಲಕ ಉತ್ತಮ ಸೇವಾ ಮನೋಭಾವದ ಕಾರ್ಯ ಹೊಂದಿದ್ದೇವೆ ಎಂದು ಹೇಳಿದರು.

ಸ್ಥಾಪಕ ಟ್ರಸ್ಟಿ ವಿಜಯ ಗೌಡ ವೇಣೂರು ಸದಸ್ಯತ್ವದ ಕುರಿತು ಮಾತನಾಡಿ, ಸಮುದಾಯದ ಎಲ್ಲರ ಸಹಕಾರದಿಂದ ಮಾತ್ರ ಟ್ರಸ್ಟ್ ನ‌‌ ಉದ್ದೇಶ ಈಡೇರಲು ಸಾಧ್ಯ ಎಂದರು.

ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀನಿವಾಸ ಗೌಡ ಬೆಳಾಲು ಅಧ್ಯಕ್ಷತೆ ವಹಿಸಿ ಟ್ರಸ್ಟ್ ನ ಉದ್ದೇಶದ ಬಗ್ಗೆ ತಿಳಿಸಿದರು.

ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಸಮಿತಿ ಕಾರ್ಯಾಧ್ಯಕ್ಷ ಜಯಂತ ಗೌಡ, ಕಾರ್ಯದರ್ಶಿ ಭರತ್ ಬಂಗಾಡಿ, ಗೌರವಾಧ್ಯಕ್ಷ ರಂಜನ್ ಜಿ.ಗೌಡ, ನಿರ್ದೇಶಕಿ ಸೌಮ್ಯಲತಾ, ಟ್ರಸ್ಟಿ ದಾಮೋದರ್ ಗೌಡ ಸುರುಳಿ ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕೇರಿಮಾರು ಹಾಗೂ ಮೋನಪ್ಪ ಗೌಡ ಬಜಿರೆ ಅವರಿಗೆ ಸಾಂಕೇತಿಕವಾಗಿ ಸದಸ್ಯತ್ವ ಅರ್ಜಿ ಫಾರಂ ವಿತರಿಸಲಾಯಿತು.

ಸ್ಥಾಪಕ ಟ್ರಸ್ಟಿ ವಸಂತ ಗೌಡ ಮರಕಡ ಸ್ವಾಗತಿಸಿದರು.
ನವೀನ್ ಗೌಡ, ಸತೀಶ್ ಮುನ್ನಡ್ಕ ನಿರೂಪಿಸಿದರು. ಕೋಶಾಧಿಕಾರಿ ಸೂರಜ್ ಒಳಂಬ್ರ ವಂದಿಸಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 5 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ