ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ವಿರೋಧ ಪಕ್ಷದ ಆಕ್ಷೇಪ – ಶರ್ಟ್ ಕಳಚಿ ಸರ್ಕಾರದ ವಿರುದ್ಧ ಘೋಷಣೆ

ಬೆಂಗಳೂರು: ಇಂದು ಆರಂಭಗೊಂಡ ವಿಶೇಷ ಬಜೆಟ್ ಅಧಿವೇಶನ ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸಂಘರ್ಷಕ್ಕೆ ಸಾಕ್ಷಿಯಾಯಿತು. ಅಧಿವೇಶನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಮೇಲೆ ಚರ್ಚೆ ನಡೆಸಲು ಸ್ಪೀಕರ್ ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದರು.

ಸ್ಪೀಕರ್ ಅವರು ತಮ್ಮ ವಿಶೇಷಾಧಿಕಾರ ಬಳಸಿ ಈ ವಿಷಯವನ್ನು ಚರ್ಚೆಗೆ ಸೇರಿಸಿದ್ದರು. ಇದಕ್ಕೆ ಆಕ್ಷೇಪಿಸಿದ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್, ಸ್ಪೀಕರ್ ವಿಶೇಷಾಧಿಕಾರದ ದುರುಪಯೋಗ ಸರಿಯಲ್ಲ ಎಂದು ಟೀಕಿಸಿದರು. ಯಾವ ನಿಯಮಾವಳಿಯಲ್ಲಿ ಈ ವಿಷಯ ತಂದಿದ್ದೀರಿ ಎಂದು ಪ್ರಶ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಯಾವ ನಿಯಮಾವಳಿಯಲ್ಲೂ ಬರುವುದಿಲ್ಲ. ಆದರೂ ಕೂಡ ಇದನ್ನು ತಂದಿದ್ದೀರಿ. ನಿಯಮದಲ್ಲಿ ಇಲ್ಲದೇ ಇರುವುದನ್ನು ಚರ್ಚೆ ಮಾಡಲು ಆಗುವುದಿಲ್ಲ. ಇದೊಂದು ಆರೆಸ್ಸೆಸ್ ಅಜೆಂಡಾ ಎಂದು ಸಿದ್ದರಾಮಯ್ಯ ಟೀಕಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಿಎಂ ಯಡಿಯೂರಪ್ಪ, ಒನ್ ನೇಷನ್ ಒನ್ ಎಲೆಕ್ಷನ್ ವಿಷಯದ ಮೇಲೆ ಚರ್ಚೆಗೆ ಬಿಎಸಿ ಸಭೆಯಲ್ಲಿ ತೀರ್ಮಾನ ಆಗಿದೆ. ಇದು ಯಾರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎಂಬುದು ಬೇಡ. ಆದರೆ, ತೀರ್ಮಾನ ಆದಂತೆ ಚರ್ಚೆ ಆಗಲಿ. ಸಭಾಧ್ಯಕ್ಷರು ತಂದ ನಿಯಮವನ್ನು ಪ್ರಶ್ನಿಸಲು ಯಾರಿಗೂ ಅಧಿಕಾರ ಇಲ್ಲ. ಕಾನೂನು ರೀತಿ ಸಭಾಧ್ಯಕ್ಷರು ವಿಷಯ ಪ್ರಸ್ತಾಪಿಸಿದ್ದಾರೆ ಎಂದು ವಿಪಕ್ಷ ಸದಸ್ಯರಿಗೆ ತಿರುಗೇಟು ನೀಡಿದರು.

ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಬೇಡಿ. ಆದರೆ, ವಿರೋಧ ಮಾತ್ರ ಮಾಡಬೇಡಿ. ವಿರೋಧ ಪಕ್ಷದವರಿಗೆ ಯಾವುದರ ಮೇಲೂ ನಂಬಿಕೆ ವಿಶ್ವಾಸ ಇಲ್ಲ. ನೀವು ಗಲಾಟೆ ಮಾಡದೇ ಬಂದು ಚರ್ಚೆ ಮಾಡುವುದನ್ನು ಬಿಟ್ಟು ಹೀಗೆ ನಡೆದುಕೊಳ್ಳುವುದು ಸರಿಯಲ್ಲ. ನಿಮ್ಮ ನಡವಳಿಗೆ ನಿಜವಾಗಿಯೂ ನಾಚಿಕೆಗೇಡಿನ ಸಂಗತಿಯಾಗಿದೆ. ಇದನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಯಡಿಯೂರಪ್ಪ ಕೆಂಡಕಾರಿದರು.

ಸದನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ತಮ್ಮ ಶರ್ಟ್ ಕಳಚಿ ತೋಳನ್ನು ಮೇಲೆತ್ತಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಇದರಿಂದ ಮತ್ತಷ್ಟು ಕೆರಳಿದ ಕಾಗೇರಿ ಅವರು, ಒಬ್ಬ ಹಿರಿಯ ಸದಸ್ಯರಾಗಿ ನಡೆದುಕೊಳ್ಳುವುದು ಹೀಗೆನಾ? ನಿಮ್ಮ ನಡವಳಿಕೆಯನ್ನು ತಿದ್ದಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸದನದಿಂದ ಹೊರ ಹಾಕಬೇಕಾಗುತ್ತದೆ ಎಂದು ಗಂಭೀರ ಎಚ್ಚರಿಕೆ ನೀಡಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ