ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಈ ಕೂಡಲೇ ಸಂಪೂರ್ಣ ಕಡಿವಾಣ ಹಾಕಿ ರಾಜ್ಯದ ವಿದ್ಯಾರ್ಥಿಗಳು ಹಾಗೂ ಯುವಜನತೆಯನ್ನು ಕಾಪಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಸಭಾಪತಿಗಳನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡೆಡ್ಲಿ ಆನ್‌ಲೈನ್ ಗೇಮ್‌ಗೆ ಯುವಜನರು ಪ್ರತಿನಿತ್ಯ ಆಹುತಿಯಾಗುತ್ತಿದ್ದಾರೆ. ಕಳೆದ 4-5 ತಿಂಗಳಲ್ಲಿ ರಾಜ್ಯದಲ್ಲಿ 16 ಕ್ಕೂ ಹೆಚ್ಚು ಜನ ಆನ್‌ಲೈನ್ ಗೇಮ್ಮ ಬೆಟ್ಟಿಂಗ್ ಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಇವು ಕೇವಲ ವರದಿಯಾದ ಪ್ರಕರಣಗಳ ಸಂಖ್ಯೆ ಮಾತ್ರ. ಸಮಾಜದ ಭೀತಿಯಿಂದ ಹಲವಾರು ಪ್ರಕರಣಗಳು ಬಯಲಾಗದೇ ಹಾಗೇ ಉಳಿದಿವೆ. ಆತ್ಮಹತ್ಯೆಗೆ ಶರಣಾದವರಲ್ಲಿ ಯುವಜನರು ಮತ್ತು ಗ್ರಾಮೀಣ ಪ್ರದೇಶದವರೇ ಹೆಚ್ಚಾಗಿದ್ದಾರೆ. ಲಕ್ಷಗಟ್ಟಲೇ ಸಾಲ ಮಾಡಿ ಹಣ ಕಳೆದುಕೊಂಡ ಹಲವಾರು ವಿದ್ಯಾರ್ಥಿಗಳು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆನ್‌ಲೈನ್ ಗೇಮಿಂಗ್ ಅನ್ನೋದು ಕೆಲವರಿಗೆ ಮನರಂಜನೆಯಾದರೆ, ಮತ್ತೆ ಕೆಲವರಿಗೆ ಜೂಜು-ಮೋಜು ಆದರೆ ಬಹುತೇಕರಿಗೆ ಅದು ಪ್ರಾಣಕ್ಕೆ ಕುತ್ತು ತರುವ ಮೃತ್ಯುಪಾಶ! “ಆಟ’ ದ ಹೆಸರಲ್ಲಿ ಆರಂಭವಾಗುವ ಹವ್ಯಾಸವು ನಂತರದಲ್ಲಿ ವ್ಯಸನವಾಗಿ ಬೆಳೆದು, ಕೊನೆಗೆ ಜೀವನವನ್ನೇ ಕಸಿದುಕೊಳ್ಳುತ್ತಿರುವ ಮಟ್ಟಕ್ಕೆ ತಲುಪುತ್ತಿದೆ. ಆಘಾತಕಾರಿ ಅಂಶವೆಂದರೆ ಈ ರೀತಿ ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವ ಬಹುತೇಕರೆಲ್ಲರೂ ಸರಿಸುಮಾರು 20 ರಿಂದ 35 ರ ವಯೋಮಾನದವರು.

ಹಣ ಕಳೆದುಕೊಳ್ಳುತ್ತಿರುವವರಲ್ಲಿ ಬಹುತೇಕರು ಸಾಲದ ಸುಳಿಗೆ ಸಿಲುಕಿರುತ್ತಾರೆ. ಈ ವಿಚಾರವನ್ನು ಸ್ನೇಹಿತರು, ಕುಟುಂಬದ ಸದಸ್ಯರ ಬಳಿಯೂ ಹೇಳಿಕೊಳ್ಳಲಾಗದೆ ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದೆರಡು ಕಡೆ ಮರ್ಯಾದೆಗೆ ಅಂಜಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿರುವಂಥ ಹೃದಯ ವಿದ್ರಾವಕ ಪ್ರಕರಣಗಳೂ ನಡೆದಿವೆ. ಜೊತೆಗೆ ವಿದ್ಯಾರ್ಥಿಗಳು ಈ ಖೆಡ್ಡಾದೊಳಗೆ ಸಿಲುಕುತ್ತಿರುವುದು ಅತ್ಯಂತ ಆತಂಕಕ್ಕೆ ಎಡೆಮಾಡಿದೆ. ಕೆಲವರು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದರೆ ಮತ್ತೆ ಕೆಲವರು ಓದುವಾಗಲೇ ಈ ಚಟಕ್ಕೆ ಬಿದ್ದು ಸರ್ವನಾಶದ ದಾರಿ ಹಿಡಿದಿದ್ದಾರೆ ಎಂದು ನಾಯಕ್ ಅವರು ವಿಧಾನ ಪರಿಷತ್ ಅಧಿವೇಶನ ಸಂದರ್ಭ ಸಭಾಪತಿಗಳ ಗಮನ ಸೆಳೆದಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 16 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 58 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 55 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ