ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಈ ಕೂಡಲೇ ಸಂಪೂರ್ಣ ಕಡಿವಾಣ ಹಾಕಿ ರಾಜ್ಯದ ವಿದ್ಯಾರ್ಥಿಗಳು ಹಾಗೂ ಯುವಜನತೆಯನ್ನು ಕಾಪಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಸಭಾಪತಿಗಳನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡೆಡ್ಲಿ ಆನ್‌ಲೈನ್ ಗೇಮ್‌ಗೆ ಯುವಜನರು ಪ್ರತಿನಿತ್ಯ ಆಹುತಿಯಾಗುತ್ತಿದ್ದಾರೆ. ಕಳೆದ 4-5 ತಿಂಗಳಲ್ಲಿ ರಾಜ್ಯದಲ್ಲಿ 16 ಕ್ಕೂ ಹೆಚ್ಚು ಜನ ಆನ್‌ಲೈನ್ ಗೇಮ್ಮ ಬೆಟ್ಟಿಂಗ್ ಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಇವು ಕೇವಲ ವರದಿಯಾದ ಪ್ರಕರಣಗಳ ಸಂಖ್ಯೆ ಮಾತ್ರ. ಸಮಾಜದ ಭೀತಿಯಿಂದ ಹಲವಾರು ಪ್ರಕರಣಗಳು ಬಯಲಾಗದೇ ಹಾಗೇ ಉಳಿದಿವೆ. ಆತ್ಮಹತ್ಯೆಗೆ ಶರಣಾದವರಲ್ಲಿ ಯುವಜನರು ಮತ್ತು ಗ್ರಾಮೀಣ ಪ್ರದೇಶದವರೇ ಹೆಚ್ಚಾಗಿದ್ದಾರೆ. ಲಕ್ಷಗಟ್ಟಲೇ ಸಾಲ ಮಾಡಿ ಹಣ ಕಳೆದುಕೊಂಡ ಹಲವಾರು ವಿದ್ಯಾರ್ಥಿಗಳು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆನ್‌ಲೈನ್ ಗೇಮಿಂಗ್ ಅನ್ನೋದು ಕೆಲವರಿಗೆ ಮನರಂಜನೆಯಾದರೆ, ಮತ್ತೆ ಕೆಲವರಿಗೆ ಜೂಜು-ಮೋಜು ಆದರೆ ಬಹುತೇಕರಿಗೆ ಅದು ಪ್ರಾಣಕ್ಕೆ ಕುತ್ತು ತರುವ ಮೃತ್ಯುಪಾಶ! “ಆಟ’ ದ ಹೆಸರಲ್ಲಿ ಆರಂಭವಾಗುವ ಹವ್ಯಾಸವು ನಂತರದಲ್ಲಿ ವ್ಯಸನವಾಗಿ ಬೆಳೆದು, ಕೊನೆಗೆ ಜೀವನವನ್ನೇ ಕಸಿದುಕೊಳ್ಳುತ್ತಿರುವ ಮಟ್ಟಕ್ಕೆ ತಲುಪುತ್ತಿದೆ. ಆಘಾತಕಾರಿ ಅಂಶವೆಂದರೆ ಈ ರೀತಿ ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವ ಬಹುತೇಕರೆಲ್ಲರೂ ಸರಿಸುಮಾರು 20 ರಿಂದ 35 ರ ವಯೋಮಾನದವರು.

ಹಣ ಕಳೆದುಕೊಳ್ಳುತ್ತಿರುವವರಲ್ಲಿ ಬಹುತೇಕರು ಸಾಲದ ಸುಳಿಗೆ ಸಿಲುಕಿರುತ್ತಾರೆ. ಈ ವಿಚಾರವನ್ನು ಸ್ನೇಹಿತರು, ಕುಟುಂಬದ ಸದಸ್ಯರ ಬಳಿಯೂ ಹೇಳಿಕೊಳ್ಳಲಾಗದೆ ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದೆರಡು ಕಡೆ ಮರ್ಯಾದೆಗೆ ಅಂಜಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿರುವಂಥ ಹೃದಯ ವಿದ್ರಾವಕ ಪ್ರಕರಣಗಳೂ ನಡೆದಿವೆ. ಜೊತೆಗೆ ವಿದ್ಯಾರ್ಥಿಗಳು ಈ ಖೆಡ್ಡಾದೊಳಗೆ ಸಿಲುಕುತ್ತಿರುವುದು ಅತ್ಯಂತ ಆತಂಕಕ್ಕೆ ಎಡೆಮಾಡಿದೆ. ಕೆಲವರು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದರೆ ಮತ್ತೆ ಕೆಲವರು ಓದುವಾಗಲೇ ಈ ಚಟಕ್ಕೆ ಬಿದ್ದು ಸರ್ವನಾಶದ ದಾರಿ ಹಿಡಿದಿದ್ದಾರೆ ಎಂದು ನಾಯಕ್ ಅವರು ವಿಧಾನ ಪರಿಷತ್ ಅಧಿವೇಶನ ಸಂದರ್ಭ ಸಭಾಪತಿಗಳ ಗಮನ ಸೆಳೆದಿದ್ದಾರೆ.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 3 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 10 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ