ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಈ ಕೂಡಲೇ ಸಂಪೂರ್ಣ ಕಡಿವಾಣ ಹಾಕಿ ರಾಜ್ಯದ ವಿದ್ಯಾರ್ಥಿಗಳು ಹಾಗೂ ಯುವಜನತೆಯನ್ನು ಕಾಪಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಸಭಾಪತಿಗಳನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡೆಡ್ಲಿ ಆನ್‌ಲೈನ್ ಗೇಮ್‌ಗೆ ಯುವಜನರು ಪ್ರತಿನಿತ್ಯ ಆಹುತಿಯಾಗುತ್ತಿದ್ದಾರೆ. ಕಳೆದ 4-5 ತಿಂಗಳಲ್ಲಿ ರಾಜ್ಯದಲ್ಲಿ 16 ಕ್ಕೂ ಹೆಚ್ಚು ಜನ ಆನ್‌ಲೈನ್ ಗೇಮ್ಮ ಬೆಟ್ಟಿಂಗ್ ಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಇವು ಕೇವಲ ವರದಿಯಾದ ಪ್ರಕರಣಗಳ ಸಂಖ್ಯೆ ಮಾತ್ರ. ಸಮಾಜದ ಭೀತಿಯಿಂದ ಹಲವಾರು ಪ್ರಕರಣಗಳು ಬಯಲಾಗದೇ ಹಾಗೇ ಉಳಿದಿವೆ. ಆತ್ಮಹತ್ಯೆಗೆ ಶರಣಾದವರಲ್ಲಿ ಯುವಜನರು ಮತ್ತು ಗ್ರಾಮೀಣ ಪ್ರದೇಶದವರೇ ಹೆಚ್ಚಾಗಿದ್ದಾರೆ. ಲಕ್ಷಗಟ್ಟಲೇ ಸಾಲ ಮಾಡಿ ಹಣ ಕಳೆದುಕೊಂಡ ಹಲವಾರು ವಿದ್ಯಾರ್ಥಿಗಳು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆನ್‌ಲೈನ್ ಗೇಮಿಂಗ್ ಅನ್ನೋದು ಕೆಲವರಿಗೆ ಮನರಂಜನೆಯಾದರೆ, ಮತ್ತೆ ಕೆಲವರಿಗೆ ಜೂಜು-ಮೋಜು ಆದರೆ ಬಹುತೇಕರಿಗೆ ಅದು ಪ್ರಾಣಕ್ಕೆ ಕುತ್ತು ತರುವ ಮೃತ್ಯುಪಾಶ! “ಆಟ’ ದ ಹೆಸರಲ್ಲಿ ಆರಂಭವಾಗುವ ಹವ್ಯಾಸವು ನಂತರದಲ್ಲಿ ವ್ಯಸನವಾಗಿ ಬೆಳೆದು, ಕೊನೆಗೆ ಜೀವನವನ್ನೇ ಕಸಿದುಕೊಳ್ಳುತ್ತಿರುವ ಮಟ್ಟಕ್ಕೆ ತಲುಪುತ್ತಿದೆ. ಆಘಾತಕಾರಿ ಅಂಶವೆಂದರೆ ಈ ರೀತಿ ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವ ಬಹುತೇಕರೆಲ್ಲರೂ ಸರಿಸುಮಾರು 20 ರಿಂದ 35 ರ ವಯೋಮಾನದವರು.

ಹಣ ಕಳೆದುಕೊಳ್ಳುತ್ತಿರುವವರಲ್ಲಿ ಬಹುತೇಕರು ಸಾಲದ ಸುಳಿಗೆ ಸಿಲುಕಿರುತ್ತಾರೆ. ಈ ವಿಚಾರವನ್ನು ಸ್ನೇಹಿತರು, ಕುಟುಂಬದ ಸದಸ್ಯರ ಬಳಿಯೂ ಹೇಳಿಕೊಳ್ಳಲಾಗದೆ ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದೆರಡು ಕಡೆ ಮರ್ಯಾದೆಗೆ ಅಂಜಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿರುವಂಥ ಹೃದಯ ವಿದ್ರಾವಕ ಪ್ರಕರಣಗಳೂ ನಡೆದಿವೆ. ಜೊತೆಗೆ ವಿದ್ಯಾರ್ಥಿಗಳು ಈ ಖೆಡ್ಡಾದೊಳಗೆ ಸಿಲುಕುತ್ತಿರುವುದು ಅತ್ಯಂತ ಆತಂಕಕ್ಕೆ ಎಡೆಮಾಡಿದೆ. ಕೆಲವರು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದರೆ ಮತ್ತೆ ಕೆಲವರು ಓದುವಾಗಲೇ ಈ ಚಟಕ್ಕೆ ಬಿದ್ದು ಸರ್ವನಾಶದ ದಾರಿ ಹಿಡಿದಿದ್ದಾರೆ ಎಂದು ನಾಯಕ್ ಅವರು ವಿಧಾನ ಪರಿಷತ್ ಅಧಿವೇಶನ ಸಂದರ್ಭ ಸಭಾಪತಿಗಳ ಗಮನ ಸೆಳೆದಿದ್ದಾರೆ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 28 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 19 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 40 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 58 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ