ಪಿಎಫ್​​ ಖಾತೆ​​ಯಿಂದ ಅನಗತ್ಯವಾಗಿ ಹಣ ತೆಗೆದು ಕೈ ಸುಟ್ಟುಕೊಳ್ಳಬೇಡಿ; 1 ಲಕ್ಷ ರೂ.ವಿತ್​ಡ್ರಾ ಮಾಡಿದರೆ 11 ಲಕ್ಷ ರೂ. ನಷ್ಟ ಗ್ಯಾರಂಟಿ !

ತಿಂಗಳ ವೇತನದಿಂದ ಭವಿಷ್ಯ ನಿಧಿಗಾಗಿ (PF)ಹಣ ಕಡಿತಗೊಳ್ಳುತ್ತಿದ್ದರೆ ಅದನ್ನು ಸುಮ್ಮನೆ ವಿತ್​ ಡ್ರಾ ಮಾಡಬಾರದು. ತೀರ ಅಗತ್ಯವಿದ್ದರೆ ಮಾತ್ರ ಪಿಎಫ್​ ಅಕೌಂಟ್​​ನಿಂದ ಹಣ ತೆಗೆಯಬೇಕು. ಆದರೆ ಅದೆಷ್ಟೋ ಜನರು, ಸುಮ್ಮನೆ ಹಣವನ್ನು ತೆಗೆದು ಖರ್ಚು ಮಾಡಿಕೊಳ್ಳುತ್ತಾರೆ. ಇದು ಒಳ್ಳೆಯದಲ್ಲ. ಪಿಎಫ್​ ನಿಮ್ಮ ಆಪತ್ಕಾಲಕ್ಕಾಗುವ ಉಳಿತಾಯದ ಹಣ ಆಗಿರುತ್ತದೆ. ಪ್ರತಿ ತಿಂಗಳೂ ಆ ಖಾತೆಯಲ್ಲಿ ಹೆಚ್ಚೆಚ್ಚು ಹಣ ಸಂಗ್ರಹವಾಗುತ್ತದೆ. ಹಾಗೇ ನಿಮ್ಮ ಪಿಎಫ್ ಠೇವಣಿ ಹಣಕ್ಕೆ ಒಳ್ಳೆಯ ಬಡ್ಡಿಯೂ ಸಿಗುತ್ತದೆ.

ಪಿಎಫ್​ ಹಣವನ್ನು ಅನಗತ್ಯವಾಗಿ ತೆಗೆಯಬಾರದು. ತೀರ ಅನಿವಾರ್ಯ ಸಂದರ್ಭವಿದ್ದರೆ ಮಾತ್ರ ವಿತ್​ ಡ್ರಾ ಮಾಡಿ, ಅದಿಲ್ಲದಿದ್ದರೆ ನಿಮ್ಮ ನಿವೃತ್ತಿಯವರೆಗೂ ಉಳಿಸಿಕೊಳ್ಳುವುದು ಒಳಿತು.

ನಿವೃತ್ತಿಗೆ ಮೊದಲೇ ಪಿಎಫ್ ಹಣ ತೆಗೆದರೆ ಖಂಡಿತ ನಿಮಗೆ ದೊಡ್ಡಪ್ರಮಾಣದಲ್ಲಿ ನಷ್ಟವಾಗುತ್ತದೆ. ಉದಾಹರಣೆಗೆ, ನೀವು ನಿವೃತ್ತಿಗೂ ಮೊದಲು 1 ಲಕ್ಷ ರೂಪಾಯಿ ವಿತ್​ ಡ್ರಾ ಮಾಡಿದಿರಿ ಎಂದಾದರೆ, ನಿಮಗೆ 11 ಲಕ್ಷ ರೂಪಾಯಿ ನಷ್ಟ ಆಗುತ್ತದೆ. ಅರೆ ! ಇದು ಹೇಗೆ ಸಾಧ್ಯ? 1 ಲಕ್ಷ ರೂ. ವಿತ್​ಡ್ರಾ ಮಾಡಿದರೆ 11 ಲಕ್ಷ ರೂ. ನಷ್ಟ ಹೇಗೆ ಎಂದು ನೀವು ಯೋಚಿಸುತ್ತಿದ್ದರೆ ಅದಕ್ಕೆ ಇಲ್ಲಿದೆ ನೋಡಿ ಉತ್ತರ..

ನೀವು ನಿವೃತ್ತರಾಗಲು ಇನ್ನೂ 30ವರ್ಷವಿದೆ ಎಂದಿಟ್ಟುಕೊಳ್ಳೋಣ. ಈಗ ನೀವೇನಾದರೂ 1 ಲಕ್ಷ ರೂ.ವಿತ್​ ಡ್ರಾ ಮಾಡಿದರೆ ನೀವು 11.55 ಲಕ್ಷ ರೂ.ಕಳೆದುಕೊಂಡಂತೆ ಎನ್ನುತ್ತಾರೆ ನಿವೃತ್ತ ಇಪಿಎಫ್​ಒ ನಿವೃತ್ತ ಸಹಾಯಕ ಆಯುಕ್ತ ಎ.ಕೆ. ಶುಕ್ಲಾ. ಒಮ್ಮೆ ಈ ಒಂದು ಲಕ್ಷ ರೂಪಾಯಿ ನಿಮ್ಮ ಪಿಎಫ್​ ಅಕೌಂಟ್​​ನಲ್ಲೇ ಇದ್ದರೆ ಅದಕ್ಕೆ ಬಡ್ಡಿ ಸೇರಿ, 30 ವರ್ಷ, ಅಂದರೆ ನಿಮ್ಮ ನಿವೃತ್ತಿ ಹೊತ್ತಿಗೆ 11.55 ಲಕ್ಷ ರೂ.ಆಗಿರುತ್ತದೆ. ಸದ್ಯ ಪಿಎಫ್​ ಹಣಕ್ಕೆ ಶೇ.8.5ರಷ್ಟು ಬಡ್ಡಿದರ ಇದೆ. ಉಳಿದೆಲ್ಲ ಸಣ್ಣ ಉಳಿತಾಯ ಯೋಜನೆಗಳಲ್ಲಿ, ಪಿಎಫ್​ಗೆ ಇರುವಷ್ಟು ಬಡ್ಡಿದರದ ಪ್ರಮಾಣ ಇನ್ಯಾವುದಕ್ಕೂ ಇಲ್ಲ. ಹೀಗಿರುವಾಗ ಪಿಎಫ್​ನಲ್ಲಿ ನೀವು ಹೆಚ್ಚೆಚ್ಚು ಹಣ ಸಂಗ್ರಹಿಸಿದಂತೆ ಸಹಜವಾಗಿ ಅದರ ಮೊತ್ತವೂ ಜಾಸ್ತಿಯಾಗುತ್ತ ಹೋಗುತ್ತದೆ.

ನಿವೃತ್ತಿಗೆ 20ವರ್ಷವಿದ್ದಾಗ 50 ಸಾವಿರ ತೆಗೆದರೆ ಏನಾಗುತ್ತದೆ? ನಿವೃತ್ತಿಗೆ ಮೊದಲು ಎಷ್ಟೇ ಹಣ ತೆಗೆದರೂ ದೊಡ್ಡ ಪ್ರಮಾಣದ ನಷ್ಟ ಆಗುವುದರಲ್ಲಿ ಸಂದೇಹವಿಲ್ಲ. ಹಾಗೇ, ನಿವೃತ್ತಿಗೆ 20 ವರ್ಷ ಬಾಕಿ ಇದ್ದಾಗ ಒಮ್ಮೆ ನಿಮ್ಮ ಪಿಎಫ್​ ಅಕೌಂಟ್​ನಿಂದ 50 ಸಾವಿರ ರೂ. ವಿತ್​ಡ್ರಾ ಮಾಡಿದಿರಿ ಎಂದಾದರೆ ಏನಿಲ್ಲವೆಂದರೂ 2 ಲಕ್ಷದ 5 ಸಾವಿರ ರೂ.ನಷ್ಟ ಅನುಭವಿಸುತ್ತೀರಿ. ಹಾಗೇ 1 ಲಕ್ಷ ರೂ.ತೆಗೆದರೆ 5.11 ಲಕ್ಷ ರೂ., 2 ಲಕ್ಷ ರೂ.ಕ್ಕೆ 10.22 ಲಕ್ಷ ರೂ. ಮತ್ತು 3 ಲಕ್ಷಕ್ಕೆ 15.33 ಲಕ್ಷ ರೂ. ನಷ್ಟ ಉಂಟಾಗುವುದು ಗ್ಯಾರಂಟಿ. ಇದೇ ಕಾರಣಕ್ಕೆ ಪಿಎಫ್ ಹಣವನ್ನು ನಿವೃತ್ತಿಗೆ ಮೊದಲು ಅನಗತ್ಯವಾಗಿ ತೆಗೆಯುವ ಮೊದಲು ಒಮ್ಮೆ ಯೋಚಿಸುವುದು ಒಳ್ಳೆಯದು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ