ವಿಚಾರಣೆ ವೇಳೆ ಕೂಲ್‌ಡ್ರಿಂಕ್ಸ್‌ ಕುಡಿದ ಪೊಲೀಸ್‌ ಅಧಿಕಾರಿ- ನ್ಯಾಯಮೂರ್ತಿ ನೀಡಿದ್ರು ಕುತೂಹಲದ ಶಿಕ್ಷೆ!

ಅಹಮದಾಬಾದ್‌: ವರ್ಚ್ಯುವಲ್​ ವಿಚಾರಣೆ ವೇಳೆ ಪೊಲೀಸರೊಬ್ಬರು ಕೂಲ್‌ಡ್ರಿಂಕ್ಸ್‌ ಕುಡಿದ ಹಿನ್ನೆಲೆಯಲ್ಲಿ, ಮುಖ್ಯನ್ಯಾಯಮೂರ್ತಿಗಳು ಅಚ್ಚರಿಯ ಶಿಕ್ಷೆ ನೀಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಕೋರ್ಟ್‌ ವಿಚಾರಣೆ ವೇಳೆ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರು ಈ ಒಂದು ಶಿಕ್ಷೆ ನೀಡಿದ್ದಾರೆ. ಅದೇನೆಂದರೆ 100 ಕ್ಯಾನ್​​ಗಳಷ್ಟು ತಂಪು ಪಾನೀಯ ವಿತರಿಸಿ ಎಂದು ಹೇಳಿದ್ದಾರೆ.

ಆಗಿದ್ದೇನೆಂದರೆ ವರ್ಚ್ಯುವಲ್​ ವಿಚಾರಣೆ ನಡೆಯುತ್ತಿತ್ತು. ಆಗ ವಿಚಾರಣೆಗೆ ಹಾಜರು ಇದ್ದ ವಕೀಲರು, ಪೊಲೀಸರು ವಿಚಾರಣೆ ಆಲಿಸುತ್ತಿದ್ದರು. ಆದರೆ ಇದೇ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಬಾಯಾರಿಕೆ ಆಯಿತೆಂದು ಒಂದೆರಡು ಗುಟುಕು ತಂಪು ಪಾನೀಯ ಸೇವಿಸಿದರು. ಇದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್​ ಅವರ ಗಮನಕ್ಕೆ ಬಂದಿತು. ವಿಚಾರಣೆ ವೇಳೆ ಇಂಥ ಕ್ರಮವು ಅಶಿಸ್ತು ಎಂದೆನಿಸಿಕೊಳ್ಳುತ್ತದೆ. ಅದೂ ವಿಚಾರಣೆಯ ಭಾಗಿಯಾಗಲು ಯಾವುದೇ ವ್ಯಕ್ತಿ ಬಂದರೂ ಇಂಥ ಕೃತ್ಯಗಳು ಅಶಿಸ್ತು ಎಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕುತೂಹಲ ಎನ್ನಿಸುವಂಥ ಶಿಕ್ಷೆಯನ್ನು ನ್ಯಾಯಮೂರ್ತಿಗಳು ನೀಡಿದ್ದಾರೆ.

ವರ್ಚ್ಯುವಲ್​ ಅರ್ಜಿ ವಿಚಾರಣೆ ವೇಳೆ ಕೋಲ್ಡ್​ ಡ್ರಿಂಕ್ಸ್​ ಸೇವಿಸಿದ ನೀವು, ನಮ್ಮ ಕೋರ್ಟ್​ನ ವಕೀಲರಿಗೆ (ಬಾರ್​ ಅಸೋಸಿಯೇಶನ್​ ಸಿಬ್ಬಂದಿ) 100 ಕ್ಯಾನ್​​ಗಳಷ್ಟು ತಂಪು ಪಾನೀಯ ವಿತರಿಸಿ ಎಂದು ಹೇಳಿದ್ದಾರೆ. ವಿಚಾರಣೆ ವರ್ಚ್ಯುವಲ್ ಆಗಿರಲಿ, ಭೌತಿಕವಾಗಿಯೇ ನಡೆಯುತ್ತಿರಲಿ, ಶಿಸ್ತು ಮುಖ್ಯ. ನೀವು ವಿಚಾರಣೆ ಮಧ್ಯೆ ತಂಪು ಪಾನೀಯದಂತೆ ಕಾಣುವ ಏನನ್ನೋ ಸೇವಿಸಿದ್ದೀರಿ. ಇದು ಸರಿಯಾದ ವರ್ತನೆಯಲ್ಲ, ಹೀಗಾಗಿ ಒಂದೋ ಶಿಸ್ತು ಕ್ರಮ ಎದುರಿಸಬೇಕು ಇಲ್ಲವೇ, ನಮ್ಮ ಹೈಕೋರ್ಟ್​ನ 100 ವಕೀಲರಿಗೆ ಕೋಲ್ಡ್​ ಡ್ರಿಂಕ್​ ವಿತರಿಸಬೇಕು ಎಂದು ನ್ಯಾಯಮೂರ್ತಿಗಳು ಹೇಳಿದರು. ಈ ಹಿಂದೆ ವಕೀಲರೊಬ್ಬರು ಸಮೋಸಾ ತಿನ್ನುವ ಮೂಲಕ ಅಶಿಸ್ತು ಪ್ರದರ್ಶನ ಮಾಡಿದ್ದರು. ಅವರಿಗೂ ತರಾಟೆಗೆ ತೆಗೆದುಕೊಂಡಿದ್ದೆ ಎಂದೂ ಸೇರಿಸಿದರು.

ಸ್ವಲ್ಪ ದಿನಗಳ ಹಿಂದೆ ಹೀಗೆ ಅರ್ಜಿಯೊಂದರ ವಿಚಾರಣೆ ವೇಳೆ ವಕೀಲರೊಬ್ಬರು ಸಮೋಸಾ ತಿಂದಿದ್ದರು. ಆಗ ಅವರಿಗೆ ನಾನು, ನೀವು ಸಮೋಸಾ ತಿನ್ನುವುದಕ್ಕೆ ನಮ್ಮಿಂದ ಏನೂ ಅಡ್ಡಿಯಿಲ್ಲ. ಆದರೆ ನಮ್ಮೆದುರಿಗೆ ನೀವು ತಿನ್ನುವಂತಿಲ್ಲ. ಒಂದೋ ಎಲ್ಲರಿಗೂ ಕೊಟ್ಟು ತಿನ್ನಬೇಕು ಇಲ್ಲವೇ ನೀವೂ ತಿನ್ನಬಾರದು ಎಂದು ಹೇಳಿದ್ದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ. ಅಷ್ಟೇ ಅಲ್ಲ, ಈಗ ತಂಪು ಪಾನೀಯ ಕುಡಿದ ಪೊಲೀಸ್ ಅಧಿಕಾರಿ ಎ.ಎಂ.ರಾಥೋಡ್​​ಗೂ ಅದನ್ನೇ ಹೇಳಿದ್ದಾರೆ. 100 ಕ್ಯಾನ್​​ ತಂಪು ಪಾನೀಯ ವಿತರಿಸಲು ಸೂಚಿಸಿದ್ದಾರೆ.

ಟ್ರಾಫಿಕ್​ ಜಂಕ್ಷನ್​​ನಲ್ಲಿ ಪೊಲೀಸ್​ ಅಧಿಕಾರಿ ಎ.ಎಂ.ರಾಥೋಡ್​ ಮತ್ತು ಇತರ ಪೊಲೀಸ್ ಅಧಿಕಾರಿಗಳು ಇಬ್ಬರು ಮಹಿಳೆಯರಿಗೆ ಥಳಿಸಿದ್ದಾರೆ ಎಂಬ ಆರೋಪ ಅರ್ಜಿಗೆ ಸಂಬಂಧಪಟ್ಟಂತೆ ಇವರು ಕೋರ್ಟ್​​ನ ವರ್ಚ್ಯುವಲ್​ ವಿಚಾರಣೆಗೆ ಹಾಜರಾಗಿದ್ದರು. ಇನ್ನು ಈ ಪ್ರಕರಣವನ್ನು ಡಿಸಿಪಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ, ಇನ್ನು 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರೂ ಸೂಚಿಸಿದ್ದಾರೆ. ಅಂದಹಾಗೆ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರು ಕನ್ನಡಿಗರು ಎನ್ನುವುದು ವಿಶೇಷ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ