ಪೋಲೀಸ್ ವಾಹನಕ್ಕೆ ಅಪಘಾತ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಜಿರೆ ಮೂಲದ ಮೂವರಿಗೆ ನ್ಯಾಯಾಂಗ ಬಂಧನ

ಉಡುಪಿ: ಬೆಳ್ತಂಗಡಿಯ ಉಜಿರೆಯ ತಿಮರೋಡಿಯಿಂದ ಪ್ರಕರಣವೊಂದಕ್ಕೆ ಬೇಕಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಕರೆತರುವ ನಿಟ್ಟಿನಲ್ಲಿ ಬ್ರಹ್ಮಾವರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿತರನ್ನು ವಶಕ್ಕೆ ಪಡೆದು ಬರುತ್ತಿದ್ದ ವೇಳೆ ಕಾರ್ಕಳದ ಹೊಸ್ಮಾರು ಎಂಬಲ್ಲಿ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ತಿಮರೋಡಿ ಬೆಂಬಲಿಗರು ಅಪಘಾತ ನಡೆಸಿದ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಗ್ಗೆ ವರದಿಯಾಗಿದೆ.

ಘಟನೆಯ ವಿವರ: ದಿನಾಂಕ 21/08/2025 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮ್ಮರೋಡಿ ರವರನ್ನು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಹಲವು ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು ಈ ಬಗ್ಗೆ ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ಗುದ್ದಿ ಆರೋಪಿತರನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದು, ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಪ್ರಕರಣ ದಾಖಲಾಗಿದ್ದು ಸದ್ರಿ ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ದಸ್ತಗಿರಿ ಮಾಡಿದ್ದು ಮುಂದಿನ ಕ್ರಮಕ್ಕೆ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಿರುತ್ತದೆ. ಜೊತೆಗೆ ಆರೋಪಿತರು ಕೃತ್ಯಕ್ಕೆ ಬಳಿಸಿ KA70M3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ