ಕೊರಗಜ್ಜನ ಕೋಲದ ವೇಳೆ ಪೋಲಿಸ್ ವಾಹನಕ್ಕೆ ಕಲ್ಲು ಎಸೆತ…!! ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು..!!

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು, ಈ ಸಮಯದಲ್ಲಿ ಅಲ್ಲೇ ಇರುವ ಬಿಲ್ಡಿಂಗ್ ಮೇಲೆ ನಿಂತು ಪೊಲೀಸ್ ವಾಹನಕ್ಕೆ ಪಕ್ಕದ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಸೇರಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕೋಡಿ ನಿವಾಸಿ ಮಹಮ್ಮದ್ ಹಫೀಝ್ ಎಂಬಾತನೇ ಬಂಧಿತ ಆರೋಪಿ. ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

READ ALSO

ಸ್ಥಳದಲ್ಲಿ ನಡೆಯುತ್ತಿದ್ದ ಕೊರಗಜ್ಜನ ಕೋಲ ಸ್ಥಳದ ಸಮೀಪದಲ್ಲೇ ಕೃತ್ಯ ನಡೆದಿರುವುದು ಕೋಮು ಸಾಮರಸ್ಯ ಕದಡಲು ಯತ್ನಿಸಿದ ಎನ್ನಲಾಗಿದ್ದು, ಭಕ್ತಾಧಿಗಳು ಸಂಯಮದಿಂದ ವರ್ತಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.