ಕೊರೋನಾ ಪಾಸಿಟಿವ್ ಬಂದ ಯುವತಿಯನ್ನು 13 ದಿನಗಳ ಕಾಲ ಗ್ರಾಮದಿಂದ ಹೊರಗಿಟ್ಟ ಗ್ರಾಮಸ್ಥರು!

ಹೈದರಾಬಾದ್​: ಮಹಾಮಾರಿ ಕರೊನಾ ವೈರಸ್​ ಸೋಂಕು ಬಂದ ಮಾತ್ರಕ್ಕೆ ಅಂತಹ ವ್ಯಕ್ತಿಯನ್ನು ಯಾರು ಸಹ ಅತ್ಯಂತ ಕೀಳಾಗಿ ನೋಡಬಾರದು. ಸಾಮಾನ್ಯರಂತೆಯೇ ಅವರೊಬ್ಬ ರೋಗಿಯೇ ಹೊರತು ತೀರ ಬೇಡವಾದವರು ಎಂಬಂತೆ ನೋಡಬಾರದು ಎಂದು ಎಷ್ಟೇ ಅರಿವು ಮೂಡಿಸಿದರು ಅಂತಹ ಕಹಿ ಘಟನೆಗಳು ಮರುಕಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯೇ ಸರಿ.

ಕರೊನಾ ಸೋಂಕು ಬಂದಿದ್ದಕ್ಕೆ ಪಿಯು ವಿದ್ಯಾರ್ಥಿನಿಯೊಬ್ಬಳನ್ನು ಸುಮಾರು 13 ದಿನಗಳ ಕಾಲ ಬಲವಂತವಾಗಿ ಊರಿನಿಂದ ಹೊರಹಾಕಿದ್ದು, ಟೆಂಟ್​ನಲ್ಲಿ ಪ್ರತ್ಯೇಕವಾಗಿ ವಾಸಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿರುವ ಘಟನೆ ತೆಲಂಗಾಣದ ಆದಿಲ್​ಬಾದ್​ ಜಿಲ್ಲೆಯಲ್ಲಿ ನಡೆದಿದೆ.


ಘಟನೆ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಸನ್​ ರೆಡ್ಡಿ ಅವರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ವೈದ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ.

ಕೋವಿಡ್​ ರೋಗಿಗಳನ್ನು ಬಹಿಷ್ಕರಿಸುವುದು ಅಮಾನವೀಯ. ಕರೊನಾ ವಿರುದ್ಧ ಹೋರಾಡುವಾಗ ಒಬ್ಬರಿಗೊಬ್ಬರು ಸಹಕಾರ ನೀಡಿ, ಮುಂದೆ ಸಾಗಬೇಕು. ಕರೊನಾ ಬಂದಿದ್ದಕ್ಕೆ ಹುಡುಗಿಯನ್ನು ಹೊರಹಾಕಿದ ಘಟನೆ ದುರಾದೃಷ್ಟಕರ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ತೆಲಂಗಾಣ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದೇನೆಂದು ಕಿಸನ್​ ರೆಡ್ಡಿ ಅವರು ಟ್ವೀಟ್​ ಮಾಡಿದ್ದಾರೆ.

ಕರೊನಾ ಪಾಸಿಟಿವ್​ ಆಗಿದ್ದಕ್ಕೆ ನಿರ್ಮಲ್​ ಜಿಲ್ಲೆಯ ಮುಧೋಳ್​ನಲ್ಲಿರುವ ತೆಲಂಗಾಣ ಬುಡಕಟ್ಟು ಕಲ್ಯಾಣ ವಸತಿ ಕಾಲೇಜಿನಿಂದ ಸಲೆಗುಡ ಗ್ರಾಮದ ತನ್ನ ಮನೆಗೆ ಮಾರ್ಚ್​ 19ರಂದು ಹುಡುಗಿ ವಾಪಸಾದಾಗ ಗ್ರಾಮಸ್ಥರು ಆಕೆಗೆ ಅನುಮತಿ ನೀಡಲಿಲ್ಲ. ಇತರರಿಗೆ ಸೋಂಕು ಅಂಟಿಸಿಬಿಡುತ್ತಾಳೆ ಎಂಬ ಭಯದಿಂದ ಹುಡುಗಿಗೆ ಗ್ರಾಮದ ಒಳಗೆ ಬರಲು ಅನುಮತಿಯನ್ನೇ ನೀಡಲಿಲ್ಲ.

ಆದಾಗ್ಯು, ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಗ್ರಾಮಸ್ಥರಿಂದ ಯಾವುದೇ ಒತ್ತಾಯವಿಲ್ಲದೆ ಹುಡುಗಿ ಸ್ವಯಂಪ್ರೇರಣೆಯಿಂದ ಪ್ರತ್ಯೇಕತೆವಾಗಿದ್ದಾಳೆ ಅಂದುಕೊಂಡರು. ಮಂಗಳವಾರ ಎರಡನೇ ಪರೀಕ್ಷೆ ನಡೆಸಿದ ಅಧಿಕಾರಿಗಳು ಹುಡುಗಿಗೆ ನೆಗಿಟಿವ್​ ವರದಿ ಬಂದಾಗ ಮನೆಗೆ ಕಳುಹಿಸಿಕೊಡಲಾಯಿತು.

ಈ ವಿಚಾರದಲ್ಲಿ ಪರ-ವಿರೋಧ ಚರ್ಚೆಗಳು ಸಹ ಕೇಳಿಬರುತ್ತಿದೆ. ಕೆಲವರು ಸ್ವತಃ ಹುಡುಗಿಯೇ ಪ್ರತ್ಯೇಕವಾಗಿದ್ದಳು. ಗ್ರಾಮಸ್ಥರು ಸಹ ಕಾಲ ಕಾಲಕ್ಕೆ ಆಹಾರ ನೀಡುವ ಮೂಲಕ ಸಹಕಾರ ನೀಡಿದ್ದಾರೆ ಎಂದು ಕೆಲ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಆದರೆ, 13 ದಿನಗಳ ಕಾಲ ಯುವತಿಯನ್ನು ಏಕಾಂಗಿಯಾಗಿ ಊರಿನ ಹೊರಭಾಗದಲ್ಲಿ ಇರಿಸಿದ್ದು ಸರಿಯಲ್ಲ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 10 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ