ಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ

ಬೆಳಗಾವಿ: ಪ.ರಾಮಕೃಷ್ಣಶಾಸ್ತ್ರಿ ಇವರು ‘ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆ-ಸಾಧನೆಯನ್ನು ಗಮನಿಸಿ ಬೆಳಗಾವಿ ಯ ಸುವರ್ಣ ಸೌಧ ದಲ್ಲಿ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾ ಳ್ಕರ್ ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖಾಂತರ ನೀಡಲಾಗುವ 2023-24 ನೇ ಸಾಲಿನ ಬಾಲ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು

ಪ. ರಾಮಕೃಷ್ಣಶಾಸ್ತ್ರಿ ಅವರು 1964ರಿಂದ ತಮ್ಮ 11ನೇ ವಯಸ್ಸಿನಿಂದ ಬರವಣಿಗೆಯಲ್ಲಿ ತೊಡಗಿಕೊಂಡವರು. ಕರ್ನಾಟಕದ ಬಹುತೇಕ ಪತ್ರಿಕೆಗಳಲ್ಲಿ ಸುಮಾರು 12,000ಕ್ಕಿಂತ ಅಧಿಕ ಲೇಖನ ಬರಹಗಳು ಪ್ರಕಟನೆಗೊಂಡಿರುತ್ತವೆ. ಮಹಾರಾಷ್ಟ್ರದ ಕನ್ನಡ ಶಾಲೆಗಳ 5. 6 ಮತ್ತು 7ನೇ ತರಗತಿ, ಕೇರಳದ ಎಂಟನೆಯ ತರಗತಿ ಹಾಗೂ ಮಂಗಳೂರು ವಿವಿ ಪಠ್ಯದಲ್ಲಿ ಇವರ ಕನ್ನಡ ಮತ್ತು ತುಳು ಕತೆಗಳು ಪಾಠವಾಗಿವೆ. ಮಕ್ಕಳಿಗಾಗಿ ೫೨ ಕಥಾ ಸಂಕಲನ, ಸಾಮಾಜಿಕ ಕಥಾ ಸಂಕಲನ, ಹಾಸ್ಯ ಲೇಖನ ಸಂಗ್ರಹ, ಜೀವನ ಚರಿತ್ರೆ, ವಯಸ್ಕರ ಶಿಕ್ಷಣಕ್ಕಾಗಿ ಪುಸ್ತಕಗಳು, ಮಹಿಳೆಯರಿಗಾಗಿ ಕೈಪಿಡಿ, ತುಳುವಿನಲ್ಲಿ ಪಣಿಯಾಡಿ ಪ್ರಶಸ್ತಿ ಪಡೆದ ಕಾದಂಬರಿ, ಕನ್ನಡ ಕಾದಂಬರಿ, ಗ್ರಾಮಾಭಿವೃದ್ಧಿ ಯೋಜನೆಗಾಗಿ ಕೈಪಿಡಿ, ಮಕ್ಕಳಿಗಾಗಿ ಭಾಗವತ, ವಿಜ್ಞಾನ ಪುಸ್ತಕ, ವೈಚಾರಿಕ ಲೇಖನಗಳ ಪುಸ್ತಕ ಸೇರಿದಂತೆ ಒಟ್ಟು 1೧೩ ಪುಸ್ತಕಗಳು ಪ್ರಕಟವಾಗಿದೆ. ಸಂಪಾದಿತ ಕೃತಿ, ಸ್ಮರಣ ಸಂಚಿಕೆ ಸಂಪಾದನೆ ಇತ್ಯಾದಿಗಳು ಇವೆ. ವಿವಿಧ ಭಾಷೆಗಳಿಗೆ ಬರಹಗಳು ಅನುವಾದಗೊಂಡಿವೆ. ಆಕಾಶವಾಣಿ, ದೂರದರ್ಶನಗಳಲ್ಲೂ ಪ್ರಸಾರವಾಗಿದೆ. ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳ ವಿವಿಧ ಗೋಷ್ಠಿಗಳ ಅಧ್ಯಕ್ಷತೆ, ತಾಲೂಕು ಚುಟುಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ ವಹಿಸಿದ ಸಾಹಿತ್ಯ ಸೇವಕ, ಯಕ್ಷಗಾನ ಅರ್ಥಧಾರಿ, ಗಮಕ ವ್ಯಾಖ್ಯಾನಕಾರರಾಗಿರುವ ರಾಮಕೃಷ್ಣಶಾಸ್ತಿ ಇವರಿಗೆ ಕೇಂದ್ರ ಸರಕಾರದ ಪರಿಸರ ಇಲಾಖೆಯ ಪ್ರಶಸ್ತಿ, ತುಳುಶ್ರೀ ಪ್ರಶಸ್ತಿ, ಅಖಿಲ ಕರ್ನಾಟಕ ಮಕ್ಕಳ ಮೇಳದ ಗೌರವ, ಪಣಿಯಾಡಿ ಪ್ರಶಸ್ತಿ, ತುಳು ಅಕಾಡೆಮಿ, ತಾಲೂಕು ರಾಜ್ಯೋತ್ಸವ ಸಮಿತಿ, ಲಯನ್ಸ್, ರೋಟರಿ ಸಮ್ಮಾನ, ಆಶಾ ಸಾಲಿಯಾನ್ ಪ್ರತಿಷ್ಠಾನ ಗೌರವ, ಮಕ್ಕಳ ಸಾಹಿತ್ಯ ಸಂಗಮ, ಸಾಹಿತ್ಯ ಪರಿಷತ್ತಿನ ಮಸ್ತಕ ಪ್ರಶಸ್ತಿಗಳು, ಕಿನ್ನಿಗೋಳಿ ಕೊ. ಆ. ಉಡುಪ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದಿಂದ ಶಿವರಾಮ ಕಾರಂತ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ.

Spread the love
  • Related Posts

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    ಬಂದಾರು: (ಡಿ. 04) ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 32 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    • By admin
    • January 5, 2026
    • 18 views
    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    • By admin
    • January 3, 2026
    • 31 views
    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    • By admin
    • January 1, 2026
    • 86 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    ಅರ್ಪಣಂ2025

    • By admin
    • December 29, 2025
    • 43 views

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ

    • By admin
    • December 24, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ