ಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ

ಬೆಳಗಾವಿ: ಪ.ರಾಮಕೃಷ್ಣಶಾಸ್ತ್ರಿ ಇವರು ‘ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆ-ಸಾಧನೆಯನ್ನು ಗಮನಿಸಿ ಬೆಳಗಾವಿ ಯ ಸುವರ್ಣ ಸೌಧ ದಲ್ಲಿ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾ ಳ್ಕರ್ ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖಾಂತರ ನೀಡಲಾಗುವ 2023-24 ನೇ ಸಾಲಿನ ಬಾಲ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು

ಪ. ರಾಮಕೃಷ್ಣಶಾಸ್ತ್ರಿ ಅವರು 1964ರಿಂದ ತಮ್ಮ 11ನೇ ವಯಸ್ಸಿನಿಂದ ಬರವಣಿಗೆಯಲ್ಲಿ ತೊಡಗಿಕೊಂಡವರು. ಕರ್ನಾಟಕದ ಬಹುತೇಕ ಪತ್ರಿಕೆಗಳಲ್ಲಿ ಸುಮಾರು 12,000ಕ್ಕಿಂತ ಅಧಿಕ ಲೇಖನ ಬರಹಗಳು ಪ್ರಕಟನೆಗೊಂಡಿರುತ್ತವೆ. ಮಹಾರಾಷ್ಟ್ರದ ಕನ್ನಡ ಶಾಲೆಗಳ 5. 6 ಮತ್ತು 7ನೇ ತರಗತಿ, ಕೇರಳದ ಎಂಟನೆಯ ತರಗತಿ ಹಾಗೂ ಮಂಗಳೂರು ವಿವಿ ಪಠ್ಯದಲ್ಲಿ ಇವರ ಕನ್ನಡ ಮತ್ತು ತುಳು ಕತೆಗಳು ಪಾಠವಾಗಿವೆ. ಮಕ್ಕಳಿಗಾಗಿ ೫೨ ಕಥಾ ಸಂಕಲನ, ಸಾಮಾಜಿಕ ಕಥಾ ಸಂಕಲನ, ಹಾಸ್ಯ ಲೇಖನ ಸಂಗ್ರಹ, ಜೀವನ ಚರಿತ್ರೆ, ವಯಸ್ಕರ ಶಿಕ್ಷಣಕ್ಕಾಗಿ ಪುಸ್ತಕಗಳು, ಮಹಿಳೆಯರಿಗಾಗಿ ಕೈಪಿಡಿ, ತುಳುವಿನಲ್ಲಿ ಪಣಿಯಾಡಿ ಪ್ರಶಸ್ತಿ ಪಡೆದ ಕಾದಂಬರಿ, ಕನ್ನಡ ಕಾದಂಬರಿ, ಗ್ರಾಮಾಭಿವೃದ್ಧಿ ಯೋಜನೆಗಾಗಿ ಕೈಪಿಡಿ, ಮಕ್ಕಳಿಗಾಗಿ ಭಾಗವತ, ವಿಜ್ಞಾನ ಪುಸ್ತಕ, ವೈಚಾರಿಕ ಲೇಖನಗಳ ಪುಸ್ತಕ ಸೇರಿದಂತೆ ಒಟ್ಟು 1೧೩ ಪುಸ್ತಕಗಳು ಪ್ರಕಟವಾಗಿದೆ. ಸಂಪಾದಿತ ಕೃತಿ, ಸ್ಮರಣ ಸಂಚಿಕೆ ಸಂಪಾದನೆ ಇತ್ಯಾದಿಗಳು ಇವೆ. ವಿವಿಧ ಭಾಷೆಗಳಿಗೆ ಬರಹಗಳು ಅನುವಾದಗೊಂಡಿವೆ. ಆಕಾಶವಾಣಿ, ದೂರದರ್ಶನಗಳಲ್ಲೂ ಪ್ರಸಾರವಾಗಿದೆ. ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳ ವಿವಿಧ ಗೋಷ್ಠಿಗಳ ಅಧ್ಯಕ್ಷತೆ, ತಾಲೂಕು ಚುಟುಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ ವಹಿಸಿದ ಸಾಹಿತ್ಯ ಸೇವಕ, ಯಕ್ಷಗಾನ ಅರ್ಥಧಾರಿ, ಗಮಕ ವ್ಯಾಖ್ಯಾನಕಾರರಾಗಿರುವ ರಾಮಕೃಷ್ಣಶಾಸ್ತಿ ಇವರಿಗೆ ಕೇಂದ್ರ ಸರಕಾರದ ಪರಿಸರ ಇಲಾಖೆಯ ಪ್ರಶಸ್ತಿ, ತುಳುಶ್ರೀ ಪ್ರಶಸ್ತಿ, ಅಖಿಲ ಕರ್ನಾಟಕ ಮಕ್ಕಳ ಮೇಳದ ಗೌರವ, ಪಣಿಯಾಡಿ ಪ್ರಶಸ್ತಿ, ತುಳು ಅಕಾಡೆಮಿ, ತಾಲೂಕು ರಾಜ್ಯೋತ್ಸವ ಸಮಿತಿ, ಲಯನ್ಸ್, ರೋಟರಿ ಸಮ್ಮಾನ, ಆಶಾ ಸಾಲಿಯಾನ್ ಪ್ರತಿಷ್ಠಾನ ಗೌರವ, ಮಕ್ಕಳ ಸಾಹಿತ್ಯ ಸಂಗಮ, ಸಾಹಿತ್ಯ ಪರಿಷತ್ತಿನ ಮಸ್ತಕ ಪ್ರಶಸ್ತಿಗಳು, ಕಿನ್ನಿಗೋಳಿ ಕೊ. ಆ. ಉಡುಪ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದಿಂದ ಶಿವರಾಮ ಕಾರಂತ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 6 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 6 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 13 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 10 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ