ಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ

ಬೆಳಗಾವಿ: ಪ.ರಾಮಕೃಷ್ಣಶಾಸ್ತ್ರಿ ಇವರು ‘ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆ-ಸಾಧನೆಯನ್ನು ಗಮನಿಸಿ ಬೆಳಗಾವಿ ಯ ಸುವರ್ಣ ಸೌಧ ದಲ್ಲಿ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾ ಳ್ಕರ್ ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖಾಂತರ ನೀಡಲಾಗುವ 2023-24 ನೇ ಸಾಲಿನ ಬಾಲ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು

ಪ. ರಾಮಕೃಷ್ಣಶಾಸ್ತ್ರಿ ಅವರು 1964ರಿಂದ ತಮ್ಮ 11ನೇ ವಯಸ್ಸಿನಿಂದ ಬರವಣಿಗೆಯಲ್ಲಿ ತೊಡಗಿಕೊಂಡವರು. ಕರ್ನಾಟಕದ ಬಹುತೇಕ ಪತ್ರಿಕೆಗಳಲ್ಲಿ ಸುಮಾರು 12,000ಕ್ಕಿಂತ ಅಧಿಕ ಲೇಖನ ಬರಹಗಳು ಪ್ರಕಟನೆಗೊಂಡಿರುತ್ತವೆ. ಮಹಾರಾಷ್ಟ್ರದ ಕನ್ನಡ ಶಾಲೆಗಳ 5. 6 ಮತ್ತು 7ನೇ ತರಗತಿ, ಕೇರಳದ ಎಂಟನೆಯ ತರಗತಿ ಹಾಗೂ ಮಂಗಳೂರು ವಿವಿ ಪಠ್ಯದಲ್ಲಿ ಇವರ ಕನ್ನಡ ಮತ್ತು ತುಳು ಕತೆಗಳು ಪಾಠವಾಗಿವೆ. ಮಕ್ಕಳಿಗಾಗಿ ೫೨ ಕಥಾ ಸಂಕಲನ, ಸಾಮಾಜಿಕ ಕಥಾ ಸಂಕಲನ, ಹಾಸ್ಯ ಲೇಖನ ಸಂಗ್ರಹ, ಜೀವನ ಚರಿತ್ರೆ, ವಯಸ್ಕರ ಶಿಕ್ಷಣಕ್ಕಾಗಿ ಪುಸ್ತಕಗಳು, ಮಹಿಳೆಯರಿಗಾಗಿ ಕೈಪಿಡಿ, ತುಳುವಿನಲ್ಲಿ ಪಣಿಯಾಡಿ ಪ್ರಶಸ್ತಿ ಪಡೆದ ಕಾದಂಬರಿ, ಕನ್ನಡ ಕಾದಂಬರಿ, ಗ್ರಾಮಾಭಿವೃದ್ಧಿ ಯೋಜನೆಗಾಗಿ ಕೈಪಿಡಿ, ಮಕ್ಕಳಿಗಾಗಿ ಭಾಗವತ, ವಿಜ್ಞಾನ ಪುಸ್ತಕ, ವೈಚಾರಿಕ ಲೇಖನಗಳ ಪುಸ್ತಕ ಸೇರಿದಂತೆ ಒಟ್ಟು 1೧೩ ಪುಸ್ತಕಗಳು ಪ್ರಕಟವಾಗಿದೆ. ಸಂಪಾದಿತ ಕೃತಿ, ಸ್ಮರಣ ಸಂಚಿಕೆ ಸಂಪಾದನೆ ಇತ್ಯಾದಿಗಳು ಇವೆ. ವಿವಿಧ ಭಾಷೆಗಳಿಗೆ ಬರಹಗಳು ಅನುವಾದಗೊಂಡಿವೆ. ಆಕಾಶವಾಣಿ, ದೂರದರ್ಶನಗಳಲ್ಲೂ ಪ್ರಸಾರವಾಗಿದೆ. ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳ ವಿವಿಧ ಗೋಷ್ಠಿಗಳ ಅಧ್ಯಕ್ಷತೆ, ತಾಲೂಕು ಚುಟುಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ ವಹಿಸಿದ ಸಾಹಿತ್ಯ ಸೇವಕ, ಯಕ್ಷಗಾನ ಅರ್ಥಧಾರಿ, ಗಮಕ ವ್ಯಾಖ್ಯಾನಕಾರರಾಗಿರುವ ರಾಮಕೃಷ್ಣಶಾಸ್ತಿ ಇವರಿಗೆ ಕೇಂದ್ರ ಸರಕಾರದ ಪರಿಸರ ಇಲಾಖೆಯ ಪ್ರಶಸ್ತಿ, ತುಳುಶ್ರೀ ಪ್ರಶಸ್ತಿ, ಅಖಿಲ ಕರ್ನಾಟಕ ಮಕ್ಕಳ ಮೇಳದ ಗೌರವ, ಪಣಿಯಾಡಿ ಪ್ರಶಸ್ತಿ, ತುಳು ಅಕಾಡೆಮಿ, ತಾಲೂಕು ರಾಜ್ಯೋತ್ಸವ ಸಮಿತಿ, ಲಯನ್ಸ್, ರೋಟರಿ ಸಮ್ಮಾನ, ಆಶಾ ಸಾಲಿಯಾನ್ ಪ್ರತಿಷ್ಠಾನ ಗೌರವ, ಮಕ್ಕಳ ಸಾಹಿತ್ಯ ಸಂಗಮ, ಸಾಹಿತ್ಯ ಪರಿಷತ್ತಿನ ಮಸ್ತಕ ಪ್ರಶಸ್ತಿಗಳು, ಕಿನ್ನಿಗೋಳಿ ಕೊ. ಆ. ಉಡುಪ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದಿಂದ ಶಿವರಾಮ ಕಾರಂತ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 5 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 13 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 8 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 12 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 21 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 40 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು