ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು!! ಶಿಕ್ಷೆ ಪ್ರಮಾಣ ನಾಳೆ ಪ್ರಕಟ

ಹಾಸನ: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಧ್ಯಾಹ್ನ ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.14 ತಿಂಗಳಿನಿಂದ ಸೆರೆಮನೆ ವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಮತ್ತೆ ಜೈಲಿನಲ್ಲಿಯೇ ಕಳೆಯಬೇಕಾಗಿದೆ. ಶಿಕ್ಷೆ ಪ್ರಮಾಣವನ್ನು ಶನಿವಾರದಂದು ಪ್ರಕಟಿಸಲಾಗುವುದು ಎಂದು ಪೀಠ ಹೇಳಿದೆ.ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಸಂತೋಷ್‌ ಗಜಾನನ ಭಟ್ ಜು.30 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಆದರೆ, ಇದೀಗ ಸಿಐಡಿ ತನಿಖಾಧಿಕಾರಿಗಳು ಹಾಗೂ ಆರೋಪಿ ಪರ ವಕೀಲರಿಂದ ಕೆಲವೊಂದು ಸ್ಪಷ್ಟನೆಗೆ ಕೋರ್ಟ್‌ ಸೂಚಿಸಿದ ಹಿನ್ನೆಲೆಯಲ್ಲಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್‌ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ ಒಟ್ಟು 9 ಆರೋಪಿಗಳಿದ್ದಾರೆ. ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ. ಅಶ್ಲೀಲ ವಿಡಿಯೋಗಳು ಪ್ರಜ್ವಲ್‌ ಮೊಬೈಲ್‌ನಿಂದಲೇ ಆತನ ಚಾಲಕನ ಮೊಬೈಲ್‌ಗೆ ಹೇಗೆ ವರ್ಗಾವಣೆಯಾಯಿತು ಎಂಬ ಸ್ಪಷ್ಟೀಕರಣ ಮತ್ತು ಕೆಲವು ತಾಂತ್ರಿಕ ಕಾರಣದಿಂದ ತೀರ್ಪು ಅನ್ನು ಮುಂದೂಡಲಾಗಿದೆ. ಪ್ರಮುಖವಾಗಿ ತನಿಖಾಧಿಕಾರಿ ಘಟನಾ ಸ್ಥಳ ತೋರಿಸಲು ಬಳಸಿರುವ ಗೂಗಲ್‌ ಮ್ಯಾಪನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಮತ್ತು ಆರೋಪಿಯಿಂದ ಜಪ್ತಿ ಮಾಡಿರುವ ಮೊಬೈಲ್‌ ಕುರಿತು ಕೆಲ ವಿವರಣೆ ಬೇಕಿರುವ ಕಾರಣ ತೀರ್ಪು ಮುಂದೂಡಲಾಗಿದೆ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 117 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 35 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 42 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ