ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರಿಂದ ನೇತಾಜಿ ಸುಭಾಶ್ಚಂದ್ರ ಬೋಸ್ ಫೋಟೋ ಅನಾವರಣ

ನವದೆಹಲಿ: ಇಂದು ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ರವರ ಫೋಟೋವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಅನಾವರಣಗೊಳಿಸಿದರು. ಸುಭಾಶ್ಚಂದ್ರ ಬೋಸ್ ಅವರ 125 ನೆಯ ಜನ್ಮದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು.

ಈ ಭಾವಚಿತ್ರವನ್ನು ಪರೇಶ್ ಮೈಟಿ ಅವರು ರಚಿಸಿದ್ದಾರೆ. ಸುಭಾಶ್ಚಂದ್ರ ಬೋಸ್ ಅವರ ಹಳೆಯ ಭಾವಚಿತ್ರವೊಂದರಿಂದ ಪ್ರೇರಿತಗೊಂಡು ಇದನ್ನು ರಚಿಸಿದ್ದಾರೆ.

ಈ ಭಾವಚಿತ್ರ ಅನಾವರಣಗೊಂಡ ಮರುಕ್ಷಣವೇ ಇದು ಚಲನಚಿತ್ರವೊಂದರಲ್ಲಿ ಗುಮ್ನಾಮಿ ಬಾಬಾ ಆಗಿ ನಟಿಸಿದ್ದ ಪ್ರಸೇನ್‌ಜಿತ್ ಚಟರ್ಜಿ ಅವರ ಚಿತ್ರ ಅನ್ನುವ ಗೊಂದಲ ಸಾಮಾಜಿಕ ಜಾಲತಾಣದಲ್ಲಿ ಹರಡಿತು. ಒಬ್ಬರು ರಾಷ್ಟ್ರಪತಿಯವರು ಸುಭಾಶ್ಚಂದ್ರ ಬೋಸ್ ಅವರ ಬದಲಿಗೆ ಪ್ರಸೇನ್ಜಿತ್ ಚಟರ್ಜಿ ಅವರ ಫೋಟೋ ಅನಾವರಣಗೊಳಿಸಿದ್ದಾರೆ ಅಂತ ಟ್ವೀಟ್ ಮಾಡಿದ್ದೇ ತಡ, ಅವರನ್ನು ಅನುಸರಿಸಿ ಹಲವಾರು ಟ್ವೀಟ್‌ಗಳು ಬರತೊಡಗಿದವು.

ಸರಕಾರ ಈ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆಯನ್ನು ಕೊಡಲಿಕ್ಕೆ ಹೋಗದಿದ್ದರೂ ಬೋಸ್ ಅವರ ಕುಟುಂಬದವರಾದ ಚಂದ್ರಕುಮಾರ್ ಬೋಸ್ ಅವರು ಮಾಡಿದ್ದ ಹಳೆಯ ಟ್ವೀಟ್ ಒಂದರಲ್ಲಿದ್ದ ಬೋಸ್ ಅವರ ಚಿತ್ರಕ್ಕೂ ಇದಕ್ಕೂ ಹೋಲಿಕೆ ಕಂಡುಬಂದಿದ್ದನ್ನು ಮತ್ಯಾರೋ ನೋಡಿ ಟ್ವೀಟ್ ಮಾಡಿದರು.

ಸಂಜೆಯ ಹೊತ್ತಿಗೆ ಚಂದ್ರಕುಮಾರ ಬೋಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿ ಆ ಭಾವಚಿತ್ರದ ಹಿನ್ನೆಲೆಯನ್ನೂ ತಿಳಿಸಿದರು. ಆಗ ರಾಷ್ಟ್ರಪತಿಯವರು ಅನಾವರಣಗೊಳಿಸಿದ್ದು ಬೋಸ್ ಅವರ ನಿಜವಾದ ಫೋಟೋವೇ ಎಂಬುದು ಎಲ್ಲರಿಗೂ ತಿಳಿಯಿತು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ