ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರಿಂದ ನೇತಾಜಿ ಸುಭಾಶ್ಚಂದ್ರ ಬೋಸ್ ಫೋಟೋ ಅನಾವರಣ

ನವದೆಹಲಿ: ಇಂದು ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ರವರ ಫೋಟೋವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಅನಾವರಣಗೊಳಿಸಿದರು. ಸುಭಾಶ್ಚಂದ್ರ ಬೋಸ್ ಅವರ 125 ನೆಯ ಜನ್ಮದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು.

ಈ ಭಾವಚಿತ್ರವನ್ನು ಪರೇಶ್ ಮೈಟಿ ಅವರು ರಚಿಸಿದ್ದಾರೆ. ಸುಭಾಶ್ಚಂದ್ರ ಬೋಸ್ ಅವರ ಹಳೆಯ ಭಾವಚಿತ್ರವೊಂದರಿಂದ ಪ್ರೇರಿತಗೊಂಡು ಇದನ್ನು ರಚಿಸಿದ್ದಾರೆ.

ಈ ಭಾವಚಿತ್ರ ಅನಾವರಣಗೊಂಡ ಮರುಕ್ಷಣವೇ ಇದು ಚಲನಚಿತ್ರವೊಂದರಲ್ಲಿ ಗುಮ್ನಾಮಿ ಬಾಬಾ ಆಗಿ ನಟಿಸಿದ್ದ ಪ್ರಸೇನ್‌ಜಿತ್ ಚಟರ್ಜಿ ಅವರ ಚಿತ್ರ ಅನ್ನುವ ಗೊಂದಲ ಸಾಮಾಜಿಕ ಜಾಲತಾಣದಲ್ಲಿ ಹರಡಿತು. ಒಬ್ಬರು ರಾಷ್ಟ್ರಪತಿಯವರು ಸುಭಾಶ್ಚಂದ್ರ ಬೋಸ್ ಅವರ ಬದಲಿಗೆ ಪ್ರಸೇನ್ಜಿತ್ ಚಟರ್ಜಿ ಅವರ ಫೋಟೋ ಅನಾವರಣಗೊಳಿಸಿದ್ದಾರೆ ಅಂತ ಟ್ವೀಟ್ ಮಾಡಿದ್ದೇ ತಡ, ಅವರನ್ನು ಅನುಸರಿಸಿ ಹಲವಾರು ಟ್ವೀಟ್‌ಗಳು ಬರತೊಡಗಿದವು.

ಸರಕಾರ ಈ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆಯನ್ನು ಕೊಡಲಿಕ್ಕೆ ಹೋಗದಿದ್ದರೂ ಬೋಸ್ ಅವರ ಕುಟುಂಬದವರಾದ ಚಂದ್ರಕುಮಾರ್ ಬೋಸ್ ಅವರು ಮಾಡಿದ್ದ ಹಳೆಯ ಟ್ವೀಟ್ ಒಂದರಲ್ಲಿದ್ದ ಬೋಸ್ ಅವರ ಚಿತ್ರಕ್ಕೂ ಇದಕ್ಕೂ ಹೋಲಿಕೆ ಕಂಡುಬಂದಿದ್ದನ್ನು ಮತ್ಯಾರೋ ನೋಡಿ ಟ್ವೀಟ್ ಮಾಡಿದರು.

ಸಂಜೆಯ ಹೊತ್ತಿಗೆ ಚಂದ್ರಕುಮಾರ ಬೋಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿ ಆ ಭಾವಚಿತ್ರದ ಹಿನ್ನೆಲೆಯನ್ನೂ ತಿಳಿಸಿದರು. ಆಗ ರಾಷ್ಟ್ರಪತಿಯವರು ಅನಾವರಣಗೊಳಿಸಿದ್ದು ಬೋಸ್ ಅವರ ನಿಜವಾದ ಫೋಟೋವೇ ಎಂಬುದು ಎಲ್ಲರಿಗೂ ತಿಳಿಯಿತು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 35 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ