ಭಾರಿ ವಿವಾದಕ್ಕೆ ಕಾರಣವಾಯ್ತ ಫ್ರೀ ವೆಡ್ಡಿಂಗ್ ಪೋಟೊಶೂಟ್! ಹಿಂದೂ ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ!

ಕೇರಳ: ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ ಶೂಟ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲದಿನಗಳ‌ ಹಿಂದೆ ಕೇರಳದ ಜೋಡಿಯೊಂದು ಕಾಫಿ ತೋಟದಲ್ಲಿ ನಡೆಸಿದ್ದ ಪೋಸ್ಟ್ ವೆಡ್ಡಿಂಗ್ ಹಸಿಬಿಸಿ ಪೋಸಿನ ಪೋಟೋ ಶೂಟ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಕೇರಳದ ಮತ್ತೊಂದು ಜೋಡಿ ನಡೆಸಿದ ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಹಿಂದೂ ಧರ್ಮಿಯರ ಕಣ್ಣು ಕೆಂಪಾಗಿಸಿದೆ.

ಋಷಿ ಹಾಗೂ ಋಷಿಮಾತೆಯಂತೆ ವೇಷಭೂಷಣ ಧರಿಸಿದ ಜೋಡಿಯೊಂದು ನದಿತೀರ,ಕಾಡಿನಲ್ಲಿ ರೋಮ್ಯಾನ್ಸ್ ಮಾಡುತ್ತಿರುವಂತೆ ಪೋಸು ನೀಡಿ ಪೋಟೋಶೂಟ್ ಮಾಡಿಸಲಾಗಿದೆ.

ಆದರೇ ಈ ಪೋಟೋ ಶೂಟ್ ನಲ್ಲಿ ಹಿಂದು ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಋಷಿಯಂತೆ ವೇಷಭೂಷಣ ಧರಿಸಿದ ಈ ಯುವ ಜೋಡಿ ತೀರಾ ಕೀಳುಮಟ್ಟದ ಭಾವಾಭಿವ್ಯಕ್ತಿ‌ ನೀಡಿದ್ದು ಪೋಟೋಸ್ ವೈರಲ್ ಆಗುತ್ತಿದ್ದಂತೆ ಜನ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೋಟೋಶೂಟ್ ಹೆಸರಿನಲ್ಲಿ ಹಿಂದೂ ಧರ್ಮಿಯರ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಈ ಜೋಡಿ ವಿರುದ್ಧ ಕ್ರಮಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಕೇರಳದ ರಿಗ್ವೆದಾ ಬೂಟಿಕ್ ಸಹಯೋಗದಲ್ಲಿ ನಡೆದ ಈ ಪೋಟೋಶೂಟ್ ನಲ್ಲಿ 1988 ರಲ್ಲಿ ‌ಮಲೆಯಾಳಂನಲ್ಲಿ ರಿಲೀಸ್ ಆದ ವೈಶಾಲಿ ಚಿತ್ರದ ಕಾನ್ಸೆಪ್ಟ್ ಬಳಸಲಾಗಿದೆ ಎನ್ನಲಾಗಿದೆ.

ಪೋಟೋಗ್ರಾಫರ್ ಮಿಧುನ್ ಸರ್ಕಾರ್ ಅವರು ತೆಗೆದಿರುವ ಈ ಪೋಟೋಶೂಟ್ ನಲ್ಲಿ ಪಾಲ್ಗೊಂಡ ಜೋಡಿ ಅಭಿಜಿತ್ ಹಾಗೂ ಜಿತು ಮಕ್ಕು ಮಾಯಾ ಎಂದು ಹೇಳಲಾಗಿದ್ದು, ಇವರು ಮದುವೆಯಾಗಲಿರೋ ಜೋಡಿಯೋ ಅಥವಾ ಫ್ರಿ ವೆಡ್ಡಿಂಗ್ ಶೂಟ್ ಗಾಗಿ ಪೋಸು ಕೊಟ್ಟ ಆರ್ಟಿಸ್ಟ್ ಗಳೋ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಪೋಟೋಗ್ರಾಫಿಯಲ್ಲಿ ಕೇರಳ ಇಡೀ ದೇಶಕ್ಕೆ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದೆ. ಮದುವೆಯ ಪೋಟೋ ಶೂಟ್ ಗಳಲ್ಲಿ ಅತೀ ಹೆಚ್ಚು ಕ್ರಿಯೆಟಿವಿಟಿಯನ್ನು ಕೇರಳದ ಛಾಯಾಗ್ರಾಹಕರು ತೋರಿಸುತ್ತಿದ್ದು, ಇಡೀ ದೇಶದಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 101 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 31 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 48 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 97 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ