ಭಾರಿ ವಿವಾದಕ್ಕೆ ಕಾರಣವಾಯ್ತ ಫ್ರೀ ವೆಡ್ಡಿಂಗ್ ಪೋಟೊಶೂಟ್! ಹಿಂದೂ ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ!

ಕೇರಳ: ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ ಶೂಟ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲದಿನಗಳ‌ ಹಿಂದೆ ಕೇರಳದ ಜೋಡಿಯೊಂದು ಕಾಫಿ ತೋಟದಲ್ಲಿ ನಡೆಸಿದ್ದ ಪೋಸ್ಟ್ ವೆಡ್ಡಿಂಗ್ ಹಸಿಬಿಸಿ ಪೋಸಿನ ಪೋಟೋ ಶೂಟ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಕೇರಳದ ಮತ್ತೊಂದು ಜೋಡಿ ನಡೆಸಿದ ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಹಿಂದೂ ಧರ್ಮಿಯರ ಕಣ್ಣು ಕೆಂಪಾಗಿಸಿದೆ.

ಋಷಿ ಹಾಗೂ ಋಷಿಮಾತೆಯಂತೆ ವೇಷಭೂಷಣ ಧರಿಸಿದ ಜೋಡಿಯೊಂದು ನದಿತೀರ,ಕಾಡಿನಲ್ಲಿ ರೋಮ್ಯಾನ್ಸ್ ಮಾಡುತ್ತಿರುವಂತೆ ಪೋಸು ನೀಡಿ ಪೋಟೋಶೂಟ್ ಮಾಡಿಸಲಾಗಿದೆ.

ಆದರೇ ಈ ಪೋಟೋ ಶೂಟ್ ನಲ್ಲಿ ಹಿಂದು ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಋಷಿಯಂತೆ ವೇಷಭೂಷಣ ಧರಿಸಿದ ಈ ಯುವ ಜೋಡಿ ತೀರಾ ಕೀಳುಮಟ್ಟದ ಭಾವಾಭಿವ್ಯಕ್ತಿ‌ ನೀಡಿದ್ದು ಪೋಟೋಸ್ ವೈರಲ್ ಆಗುತ್ತಿದ್ದಂತೆ ಜನ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೋಟೋಶೂಟ್ ಹೆಸರಿನಲ್ಲಿ ಹಿಂದೂ ಧರ್ಮಿಯರ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಈ ಜೋಡಿ ವಿರುದ್ಧ ಕ್ರಮಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಕೇರಳದ ರಿಗ್ವೆದಾ ಬೂಟಿಕ್ ಸಹಯೋಗದಲ್ಲಿ ನಡೆದ ಈ ಪೋಟೋಶೂಟ್ ನಲ್ಲಿ 1988 ರಲ್ಲಿ ‌ಮಲೆಯಾಳಂನಲ್ಲಿ ರಿಲೀಸ್ ಆದ ವೈಶಾಲಿ ಚಿತ್ರದ ಕಾನ್ಸೆಪ್ಟ್ ಬಳಸಲಾಗಿದೆ ಎನ್ನಲಾಗಿದೆ.

ಪೋಟೋಗ್ರಾಫರ್ ಮಿಧುನ್ ಸರ್ಕಾರ್ ಅವರು ತೆಗೆದಿರುವ ಈ ಪೋಟೋಶೂಟ್ ನಲ್ಲಿ ಪಾಲ್ಗೊಂಡ ಜೋಡಿ ಅಭಿಜಿತ್ ಹಾಗೂ ಜಿತು ಮಕ್ಕು ಮಾಯಾ ಎಂದು ಹೇಳಲಾಗಿದ್ದು, ಇವರು ಮದುವೆಯಾಗಲಿರೋ ಜೋಡಿಯೋ ಅಥವಾ ಫ್ರಿ ವೆಡ್ಡಿಂಗ್ ಶೂಟ್ ಗಾಗಿ ಪೋಸು ಕೊಟ್ಟ ಆರ್ಟಿಸ್ಟ್ ಗಳೋ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಪೋಟೋಗ್ರಾಫಿಯಲ್ಲಿ ಕೇರಳ ಇಡೀ ದೇಶಕ್ಕೆ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದೆ. ಮದುವೆಯ ಪೋಟೋ ಶೂಟ್ ಗಳಲ್ಲಿ ಅತೀ ಹೆಚ್ಚು ಕ್ರಿಯೆಟಿವಿಟಿಯನ್ನು ಕೇರಳದ ಛಾಯಾಗ್ರಾಹಕರು ತೋರಿಸುತ್ತಿದ್ದು, ಇಡೀ ದೇಶದಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ