ಸಾರಿಗೆ ನೌಕರರ ಮುಷ್ಕರವೇ ನಿಷೇಧ! ಕಾರ್ಮಿಕ ಇಲಾಖೆಯಿಂದ ಮಹತ್ವದ ಆದೇಶ!

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ತರುವವರೆಗೂ ಮುಷ್ಕರ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರಿಗೆ ಸರ್ಕಾರ ಶಾಕ್‌ ನೀಡಿದ್ದು, ಮುಷ್ಕರ ಹತ್ತಿಕ್ಕಲು ಕಾನೂನು ಅಸ್ತ್ರ ಪ್ರಯೋಗಿಸಿದೆ.

ಹೌದು, ಕಾನೂನಿನ ಮೂಲಕ ಸಾರಿಗೆ ನೌಕರರ ಮುಷ್ಕರವನ್ನ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಉಪಯುಕ್ತ ಸೇವೆ ಎಂದು ಪರಿಗಣಿಸಿ ಮುಷ್ಕರ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶ ಹೊರಡಿಸಲಾಗಿದೆ.

READ ALSO

ಕೈಗಾರಿಕಾ ವಿವಾದ ಕಾಯ್ದೆ 21(1) (d) ಅನ್ವಯ ಮುಷ್ಕರಕ್ಕೆ ತಡೆ ನೀಡಿ, ಮುಷ್ಕರ ನಿಷೇಧಿಸಿ ನಾಲ್ಕು ನಿಗಮಗಳಿಗೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಇನ್ನು ಕೈಗಾರಿಕಾ ವಿವಾದ ಕಾಯ್ದೆ 21(1) (d) ಅನ್ವಯ ಸಂಧಾನ‌ ಪ್ರಕ್ರಿಯೆ ಬಾಕಿ ಇರುವಾಗ ಯಾವುದೇ ಮುಷ್ಕರ ನಡೆಸುವಂತಿಲ್ಲ ಎಂದು ಸರ್ಕಾರ ಹೇಳಿದೆ. ಇನ್ನು ಬಿಎಂಟಿಸಿ, ಕೆಎಸ್‌ಆರ್​ಟಿಸಿ, ವಾಯುವ್ಯ, ಈಶಾನ್ಯ ನಾಲ್ಕೂ ನಿಗಮಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ತಕ್ಷಣಕ್ಕೆ ಜಾರಿಗೆ ತರುವಂತೆ ಸೂಚಿಸಿದೆ