ಪಿಯು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿ: ಮುಂಬರುವ ಪರೀಕ್ಷೆಗಳಿಗೆ ಸಿದ್ಧವಾಗಲು “ದೀಕ್ಷಾ” ಆಯಪ್ ಲೋಕಾರ್ಪಣೆ

ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆಪ್​ಗೆ (DIKSHA-app) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು. 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಯಾ ಆಪ್​ನಲ್ಲಿ ಲಭ್ಯವಿದ್ದು, SSLC ವಿದ್ಯಾರ್ಥಿಗಳಿಗೆ ಫೋಕಸ್ ಎಂಬ ಪುನರ್‌ಮನನ ಮತ್ತು ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ಅಭ್ಯಾಸ’ ಎಂಬ ಕಾರ್ಯಕ್ರಮಗಳು ಆಯಪ್​ನಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಹಾಯ ಮಾಡಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆಯಪ್ ಸಹಕಾರಿಯಾಗಲಿದೆ ಎಂದರು.

ಆಯಪ್​ನಲ್ಲಿ ಏನಿದೆ?
ಫೋಕಸ್ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಲಾಗಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ.

ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9,000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ. ಈ ಎಲ್ಲ ಪಠ್ಯಾಂಶಗಳನ್ನು ‘DIKSHA-app’ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋರಿದರು.

ಏನಿದು ದೀಕ್ಷಾ-ಆಪ್ ಪ್ರೋಗ್ರಾಂ??
DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳಲ್ಲಿ DIKSHA ಆಪ್​ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಯಪ್​ ಡೌನ್ಲೋಡ್ ಮಾಡಿಕೊಳ್ಳಬಹುದು: http://bit.ly/KA-diksha

DIKSHA ಆಯಪ್​ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.

ದೀಕ್ಷಾ-ಆಪ್ ಉದ್ದೇಶ
ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸಂಪನ್ಮೂಲಗಳನ್ನು ಒದಗಿಸಿ, ಅವರ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರೋಗ್ರಾಂ ರೂಪಿಸಲಾಗಿದೆ. ಕೊವಿಡ್ ಪಿಡುಗಿನ ಈ ಕಷ್ಟಕರ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ನಿಯಮಿತವಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಶಿಕ್ಷಣ ಇಲಾಖೆಯು ಚಂದನ ಟಿವಿಯ ಮೂಲಕ ಆನಲೈನ್ ಪಾಠಗಳನ್ನು ನಡೆಸುತ್ತಿದೆ. ಆದಾಗ್ಯೂ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಪಾಠಗಳನ್ನು ವೀಕ್ಷಿಸುವುದು ಸಾಧ್ಯವಾಗಿರುವುದಿಲ್ಲ. ದೀಕ್ಷಾ ಪೋರ್ಟಲ್​ನಲ್ಲಿ ಅಳವಡಿಸಲಾಗಿರುವ ಈ ಎಲ್ಲಾ ಇ-ಕಲಿಕಾ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ತಮಗೆ ಸಾಧ್ಯವಾದಾಗ ಮತ್ತು ಅಗತ್ಯವಿದ್ದಾಗ ಬಳಸಬಹುದಾಗಿದೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 58 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️