ಪಿಯು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿ: ಮುಂಬರುವ ಪರೀಕ್ಷೆಗಳಿಗೆ ಸಿದ್ಧವಾಗಲು “ದೀಕ್ಷಾ” ಆಯಪ್ ಲೋಕಾರ್ಪಣೆ

ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆಪ್​ಗೆ (DIKSHA-app) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು. 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಯಾ ಆಪ್​ನಲ್ಲಿ ಲಭ್ಯವಿದ್ದು, SSLC ವಿದ್ಯಾರ್ಥಿಗಳಿಗೆ ಫೋಕಸ್ ಎಂಬ ಪುನರ್‌ಮನನ ಮತ್ತು ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ಅಭ್ಯಾಸ’ ಎಂಬ ಕಾರ್ಯಕ್ರಮಗಳು ಆಯಪ್​ನಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಹಾಯ ಮಾಡಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆಯಪ್ ಸಹಕಾರಿಯಾಗಲಿದೆ ಎಂದರು.

ಆಯಪ್​ನಲ್ಲಿ ಏನಿದೆ?
ಫೋಕಸ್ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಲಾಗಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ.

ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9,000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ. ಈ ಎಲ್ಲ ಪಠ್ಯಾಂಶಗಳನ್ನು ‘DIKSHA-app’ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋರಿದರು.

ಏನಿದು ದೀಕ್ಷಾ-ಆಪ್ ಪ್ರೋಗ್ರಾಂ??
DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳಲ್ಲಿ DIKSHA ಆಪ್​ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಯಪ್​ ಡೌನ್ಲೋಡ್ ಮಾಡಿಕೊಳ್ಳಬಹುದು: http://bit.ly/KA-diksha

DIKSHA ಆಯಪ್​ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.

ದೀಕ್ಷಾ-ಆಪ್ ಉದ್ದೇಶ
ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸಂಪನ್ಮೂಲಗಳನ್ನು ಒದಗಿಸಿ, ಅವರ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರೋಗ್ರಾಂ ರೂಪಿಸಲಾಗಿದೆ. ಕೊವಿಡ್ ಪಿಡುಗಿನ ಈ ಕಷ್ಟಕರ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ನಿಯಮಿತವಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಶಿಕ್ಷಣ ಇಲಾಖೆಯು ಚಂದನ ಟಿವಿಯ ಮೂಲಕ ಆನಲೈನ್ ಪಾಠಗಳನ್ನು ನಡೆಸುತ್ತಿದೆ. ಆದಾಗ್ಯೂ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಪಾಠಗಳನ್ನು ವೀಕ್ಷಿಸುವುದು ಸಾಧ್ಯವಾಗಿರುವುದಿಲ್ಲ. ದೀಕ್ಷಾ ಪೋರ್ಟಲ್​ನಲ್ಲಿ ಅಳವಡಿಸಲಾಗಿರುವ ಈ ಎಲ್ಲಾ ಇ-ಕಲಿಕಾ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ತಮಗೆ ಸಾಧ್ಯವಾದಾಗ ಮತ್ತು ಅಗತ್ಯವಿದ್ದಾಗ ಬಳಸಬಹುದಾಗಿದೆ.

Spread the love
  • Related Posts

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    You Missed

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 3 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 8 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 7 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 9 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 9 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ