ಪಿಯು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿ: ಮುಂಬರುವ ಪರೀಕ್ಷೆಗಳಿಗೆ ಸಿದ್ಧವಾಗಲು “ದೀಕ್ಷಾ” ಆಯಪ್ ಲೋಕಾರ್ಪಣೆ

ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆಪ್​ಗೆ (DIKSHA-app) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು. 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಯಾ ಆಪ್​ನಲ್ಲಿ ಲಭ್ಯವಿದ್ದು, SSLC ವಿದ್ಯಾರ್ಥಿಗಳಿಗೆ ಫೋಕಸ್ ಎಂಬ ಪುನರ್‌ಮನನ ಮತ್ತು ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷಾ ಅಭ್ಯಾಸ’ ಎಂಬ ಕಾರ್ಯಕ್ರಮಗಳು ಆಯಪ್​ನಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಸಹಾಯ ಮಾಡಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆಯಪ್ ಸಹಕಾರಿಯಾಗಲಿದೆ ಎಂದರು.

ಆಯಪ್​ನಲ್ಲಿ ಏನಿದೆ?
ಫೋಕಸ್ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಲಾಗಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ.

ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9,000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ. ಈ ಎಲ್ಲ ಪಠ್ಯಾಂಶಗಳನ್ನು ‘DIKSHA-app’ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋರಿದರು.

ಏನಿದು ದೀಕ್ಷಾ-ಆಪ್ ಪ್ರೋಗ್ರಾಂ??
DIKSHA ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳಲ್ಲಿ DIKSHA ಆಪ್​ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಯಪ್​ ಡೌನ್ಲೋಡ್ ಮಾಡಿಕೊಳ್ಳಬಹುದು: http://bit.ly/KA-diksha

DIKSHA ಆಯಪ್​ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.

ದೀಕ್ಷಾ-ಆಪ್ ಉದ್ದೇಶ
ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸಂಪನ್ಮೂಲಗಳನ್ನು ಒದಗಿಸಿ, ಅವರ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರೋಗ್ರಾಂ ರೂಪಿಸಲಾಗಿದೆ. ಕೊವಿಡ್ ಪಿಡುಗಿನ ಈ ಕಷ್ಟಕರ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ನಿಯಮಿತವಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಶಿಕ್ಷಣ ಇಲಾಖೆಯು ಚಂದನ ಟಿವಿಯ ಮೂಲಕ ಆನಲೈನ್ ಪಾಠಗಳನ್ನು ನಡೆಸುತ್ತಿದೆ. ಆದಾಗ್ಯೂ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಪಾಠಗಳನ್ನು ವೀಕ್ಷಿಸುವುದು ಸಾಧ್ಯವಾಗಿರುವುದಿಲ್ಲ. ದೀಕ್ಷಾ ಪೋರ್ಟಲ್​ನಲ್ಲಿ ಅಳವಡಿಸಲಾಗಿರುವ ಈ ಎಲ್ಲಾ ಇ-ಕಲಿಕಾ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ತಮಗೆ ಸಾಧ್ಯವಾದಾಗ ಮತ್ತು ಅಗತ್ಯವಿದ್ದಾಗ ಬಳಸಬಹುದಾಗಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 4 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 10 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 5 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 11 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು