ಪಬ್ ಜೀ ಆಟದಲ್ಲಿ ಗೆದ್ದವ ಜೀವನದ ಆಟದಲ್ಲಿ ಗೆಲ್ಲಲಿಲ್ಲ! 13ವರ್ಷದ ಬಾಲಕನ ಕೊಲೆಗೆ ಪಬ್ ಜೀ ಜತೆಗಾರನೇ ಕಾರಣನಾದನೇ! ಮಕ್ಕಳ ಕೈಯಲ್ಲಿ ಮೊಬೈಲ್ ಎಂಬ ಮಾಯಾಂಗನೇಯನ್ನು ಕೊಡುವ ಪೋಷಕರು ತಪ್ಪದೇ ಓದಿ

ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್‌ (12) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್‌ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾದ ಬಾಲಕ ಹಕೀಫ್

ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್‌ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು‌ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್‌ ಜಿ ಜತೆಗಾರ ದೀಪಕ್‌ (18)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಕೀಫ್‌ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಕೀಫ್‌ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್‌ ಸಣ್ಣ ಕಲ್ಲೆಸೆದು ದೀಪಕ್‌ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನು ಹಕೀಫ್‌ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್‌ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ