ಪಬ್ ಜೀ ಆಟದಲ್ಲಿ ಗೆದ್ದವ ಜೀವನದ ಆಟದಲ್ಲಿ ಗೆಲ್ಲಲಿಲ್ಲ! 13ವರ್ಷದ ಬಾಲಕನ ಕೊಲೆಗೆ ಪಬ್ ಜೀ ಜತೆಗಾರನೇ ಕಾರಣನಾದನೇ! ಮಕ್ಕಳ ಕೈಯಲ್ಲಿ ಮೊಬೈಲ್ ಎಂಬ ಮಾಯಾಂಗನೇಯನ್ನು ಕೊಡುವ ಪೋಷಕರು ತಪ್ಪದೇ ಓದಿ

ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್‌ (12) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್‌ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾದ ಬಾಲಕ ಹಕೀಫ್

ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್‌ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು‌ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್‌ ಜಿ ಜತೆಗಾರ ದೀಪಕ್‌ (18)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಕೀಫ್‌ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಕೀಫ್‌ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್‌ ಸಣ್ಣ ಕಲ್ಲೆಸೆದು ದೀಪಕ್‌ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನು ಹಕೀಫ್‌ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್‌ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು