ಪಬ್ ಜೀ ಆಟದಲ್ಲಿ ಗೆದ್ದವ ಜೀವನದ ಆಟದಲ್ಲಿ ಗೆಲ್ಲಲಿಲ್ಲ! 13ವರ್ಷದ ಬಾಲಕನ ಕೊಲೆಗೆ ಪಬ್ ಜೀ ಜತೆಗಾರನೇ ಕಾರಣನಾದನೇ! ಮಕ್ಕಳ ಕೈಯಲ್ಲಿ ಮೊಬೈಲ್ ಎಂಬ ಮಾಯಾಂಗನೇಯನ್ನು ಕೊಡುವ ಪೋಷಕರು ತಪ್ಪದೇ ಓದಿ

ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್‌ (12) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್‌ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾದ ಬಾಲಕ ಹಕೀಫ್

ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್‌ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು‌ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್‌ ಜಿ ಜತೆಗಾರ ದೀಪಕ್‌ (18)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಕೀಫ್‌ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಕೀಫ್‌ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್‌ ಸಣ್ಣ ಕಲ್ಲೆಸೆದು ದೀಪಕ್‌ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನು ಹಕೀಫ್‌ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್‌ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

Spread the love
  • Related Posts

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 1 views

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 9 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 8 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 9 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 9 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!