ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬಾಲಕಿಯರದ್ದೇ ಮೇಲುಗೈ, ಉಡುಪಿ ದ.ಕ ಜಿಲ್ಲೆಗಳು ಅಗ್ರಸ್ಥಾನದಲ್ಲಿ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ವಿಜಯಪುರಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 1,83,725 (ಶೇ.54.55) ಬಾಲಕರು 2,43,572(ಶೇ.68.73) ಬಾಲಕಿಯರು ತೇರ್ಗಡೆಯಾಗಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಪಿಯು ಬೋರ್ಡ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಅನೇಕ ಸವಾಲಿನ ಮಧ್ಯೆ ಪರೀಕ್ಷೆ ನಡೆದಿದೆ. ದೇಶದಲ್ಲಿ ಮೊದಲ ರಾಜ್ಯ ಈ ಕಷ್ಟದಲ್ಲಿ ಪರೀಕ್ಷೆ ಮಾಡಿ ಫಲಿತಾಂಶ ನೀಡುತ್ತಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದರು.

ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸರ್ಕಾರ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದು.

ಜಿಲ್ಲಾವಾರು ಫಲಿತಾಂಶ
ಉಡುಪಿ, ದಕ್ಷಿಣ ಕನ್ನಡ
 ಮೊದಲ ಸ್ಥಾನ – ಶೇ.90.71
ಕೊಡಗು ಎರಡನೇ ಸ್ಥಾನ – ಶೇ.81.53
ಉತ್ತರ ಕನ್ನಡ ಮೂರನೇ ಸ್ಥಾನ – ಶೇ.80.97

ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ?
ಉನ್ನತ – 2,21,867
ಪ್ರಥಮ – 2,21,867
ದ್ವಿತಿಯ – 77,455
ತೃತೀಯ – 49,110

ವಿಭಾಗವಾರು ಫಲಿತಾಂಶ
ಕಲಾ – ಶೇ.41.27(ಕಳೆದ ವರ್ಷ ಶೇ.50.53)
ವಿಜ್ಞಾನ -ಶೇ.76.02% ( ಕಳೆದ ವರ್ಷ ಶೇ. 66.58)
ಕಾಮರ್ಸ್-ಶೇ. 65.53( ಕಳೆದ ವರ್ಷ 66.39)

ವಿಭಾಗವಾರು ಅತಿ ಹೆಚ್ಚು ಅಂಕ
ಕಲಾ – 594
ವಾಣಿಜ್ಯ ವಿಭಾಗ – 598
ವಿಜ್ಞಾನ ವಿಭಾಗ – 596

ಈ ಬಾರಿ ಒಟ್ಟು 6 ಲಕ್ಷದ 80 ಸಾವಿರದ 49 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3 ಲಕ್ಷದ 38 ಸಾವಿರದ 431 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 41 ಸಾವಿರದ 618 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ರಾಜ್ಯಾದ್ಯಂತ 1016 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 70 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿತ್ತು. ಒಟ್ಟು 11,970 ಶಿಕ್ಷಕರು ಮೌಲ್ಯಮಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ