ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಶಿರೂರು ಶ್ರೀಪಾದರ ಆರಾಧನೆ.

ಮೂಲ್ಕಿ: ನಿರಂತರ 48 ವರ್ಷಗಳ ಕಾಲ ಉಡುಪಿ ಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ನಡೆಸಿದ ಶ್ರೀಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಆರಾಧನೆಯು ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಜರಗಿತು.

ಶಿರೂರು ಶ್ರೀಪಾದರ ಪೂರ್ವಾಶ್ರಮದ ಮೂಲ ದೇವತಾ ಸನ್ನಿಧಾನವಾದ ಪುನರೂರು ಕ್ಷೇತ್ರದಲ್ಲಿ ಕುಟುಂಬಿಕರ ಉಪಸ್ಥಿತಿಯಲ್ಲಿ ಶ್ರೀವಿಶ್ವನಾಥ ದೇವರಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀಗುರುಮೂರ್ತಿಯವರು ಮಹಾಪೂಜೆ ಸಹಿತ ಏಕಾದಶ ರುದ್ರಾಭಿಷೇಕ, ಹಾಗೂ ವಿದ್ವಾಂಸರಾದ ಕಡಂದಲೆ ಅನಂತ
ಕೃಷ್ಣಾಚಾರ್ಯಾರು ಪವಮಾನ ಹೋಮವನ್ನು ವಿಧಿವತ್ತಾಗಿ ನಡೆಸಿಕೊಟ್ಟರು. ತದನಂತರ ಶ್ರೀ ಶಿರೂರು ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ವಿವಿಧ ತೀರ್ಥಕ್ಷೇತ್ರಗಳ ತೀರ್ಥಗಳಿಂದ ಕಲಶಾಭಿಷೇಕ ನೆರವೇರಿತು.

ಶ್ರೀಪಾದರ ಸ್ಮರಣಾರ್ಥವಾಗಿ ಶ್ರೀಕೇಮಾರು ಮಠದ ಶ್ರೀಈಶವಿಟ್ಟಲದಾಸ ಸ್ವಾಮೀಜಿಯವರು ಕೇಮಾರಿನಲ್ಲಿ ತಮ್ಮ ಪಟ್ಟದ ದೇವರಾದ ಶ್ರೀವರದನಾರಾಯಣ ದೇವರಿಗೆ ಹಾಗೂ ಬೃಹತ್ ಶಾಲಗ್ರಾಮ ಸನಿಧಾನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಪುನರೂರು ದೇವಾಲಯದ ಆಡಳಿತ ಮಂಡಳಿಯ ಮುಖ್ಯಸ್ಥರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು,ಪಟೇಲ ವಾಸುದೇವ ರಾವ್,
ಯುಗಪುರುಷ ಪ್ರಕಟಣಾಲಯದ ಶ್ರೀ ಭುವನಾಭಿರಾಮ ಉಡುಪ, ಶಿಮಂತೂರು ದೇವಾಲಯದ ಪ್ರಧಾನ ಅರ್ಚಕ ಶ್ರೀ ಪುರುಷೋತ್ತಮ ಆಚಾರ್, ಶಿರೂರು ಶ್ರೀಪಾದರ ಪೂರ್ವಾಶ್ರಮದ ಸಹೋದರರಾದ ಪಿ.ವಾದಿರಾಜ ಆಚಾರ್ಯ, ಪಿ.ಶ್ರೀನಿವಾಸ ಆಚಾರ್ಯ, ಪಿ.ಲಾತವ್ಯಆಚಾರ್ಯ, ಪಿ.ವೃಜನಾಥ ಆಚಾರ್ಯ, ಬಂಧುಗಳಾದ ಪ್ರಹ್ಲಾದ ಆಚಾರ್ಯ ಸೊಂಡೂರು, ಅಕ್ಷೋಭ್ಯ ಆಚಾರ್ಯ, ಅರ್ಜುನ ಆಚಾರ್ಯ, ಹರೀಶ ಜೋಯಿಸ್, ಲಕ್ಷ್ಮೀಶ ಜೋಯಿಸ್, ಡಾ!ವ್ಯಾಸರಾಜ ತಂತ್ರಿ ಹಾಗೂ ಪುನರೂರು ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಶ್ರೀಪಾದರ ಆರಾಧನಾ ಪ್ರಯುಕ್ತ
ಬೆಂಗಳೂರಿನಲ್ಲಿರುವ ಶ್ರೀಪಾದರ ಶಿಷ್ಯ ಗುರುರಾಜ ಆಚಾರ್ಯ ಇವರು ಪ್ರಾತಃಕಾಲದಲ್ಲಿ ವಾಯುಸ್ತುತಿ ಪುರಶ್ಚರಣೆ ಹೋಮ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಶಿಮಂತೂರಿನ ಶ್ರೀಆದಿಜನಾರ್ದನ ದೇವರಿಗೆ ಪವಮಾನ ಕಲಶಾಭಿಷೇಕ ಈ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.
ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಹುಟ್ಟೂರಾದ ಮಡಾಮಕ್ಕಿಯಲ್ಲಿ ವೇದಮೂರ್ತಿ ಶ್ರೀಕೃಷ್ಣ ಮೂರ್ತಿ ಮಂಜರು ಹಾಗೂ ಶ್ರೀಅನಂತ ತಂತ್ರಿ ಮಡಾಮಕ್ಕಿ ಇವರ ನೇತೃತ್ವದಲ್ಲಿ ಗ್ರಾಮ ದೇವರಿಗೆ ರುದ್ರಾಭಿಷೇಕ ಸಹಿತ ವಿಶೇಷ ಪೂಜೆ ನೆರವೇರಿತು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ