ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಶಿರೂರು ಶ್ರೀಪಾದರ ಆರಾಧನೆ.

ಮೂಲ್ಕಿ: ನಿರಂತರ 48 ವರ್ಷಗಳ ಕಾಲ ಉಡುಪಿ ಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ನಡೆಸಿದ ಶ್ರೀಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಆರಾಧನೆಯು ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಜರಗಿತು.

ಶಿರೂರು ಶ್ರೀಪಾದರ ಪೂರ್ವಾಶ್ರಮದ ಮೂಲ ದೇವತಾ ಸನ್ನಿಧಾನವಾದ ಪುನರೂರು ಕ್ಷೇತ್ರದಲ್ಲಿ ಕುಟುಂಬಿಕರ ಉಪಸ್ಥಿತಿಯಲ್ಲಿ ಶ್ರೀವಿಶ್ವನಾಥ ದೇವರಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀಗುರುಮೂರ್ತಿಯವರು ಮಹಾಪೂಜೆ ಸಹಿತ ಏಕಾದಶ ರುದ್ರಾಭಿಷೇಕ, ಹಾಗೂ ವಿದ್ವಾಂಸರಾದ ಕಡಂದಲೆ ಅನಂತ
ಕೃಷ್ಣಾಚಾರ್ಯಾರು ಪವಮಾನ ಹೋಮವನ್ನು ವಿಧಿವತ್ತಾಗಿ ನಡೆಸಿಕೊಟ್ಟರು. ತದನಂತರ ಶ್ರೀ ಶಿರೂರು ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ವಿವಿಧ ತೀರ್ಥಕ್ಷೇತ್ರಗಳ ತೀರ್ಥಗಳಿಂದ ಕಲಶಾಭಿಷೇಕ ನೆರವೇರಿತು.

ಶ್ರೀಪಾದರ ಸ್ಮರಣಾರ್ಥವಾಗಿ ಶ್ರೀಕೇಮಾರು ಮಠದ ಶ್ರೀಈಶವಿಟ್ಟಲದಾಸ ಸ್ವಾಮೀಜಿಯವರು ಕೇಮಾರಿನಲ್ಲಿ ತಮ್ಮ ಪಟ್ಟದ ದೇವರಾದ ಶ್ರೀವರದನಾರಾಯಣ ದೇವರಿಗೆ ಹಾಗೂ ಬೃಹತ್ ಶಾಲಗ್ರಾಮ ಸನಿಧಾನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಪುನರೂರು ದೇವಾಲಯದ ಆಡಳಿತ ಮಂಡಳಿಯ ಮುಖ್ಯಸ್ಥರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು,ಪಟೇಲ ವಾಸುದೇವ ರಾವ್,
ಯುಗಪುರುಷ ಪ್ರಕಟಣಾಲಯದ ಶ್ರೀ ಭುವನಾಭಿರಾಮ ಉಡುಪ, ಶಿಮಂತೂರು ದೇವಾಲಯದ ಪ್ರಧಾನ ಅರ್ಚಕ ಶ್ರೀ ಪುರುಷೋತ್ತಮ ಆಚಾರ್, ಶಿರೂರು ಶ್ರೀಪಾದರ ಪೂರ್ವಾಶ್ರಮದ ಸಹೋದರರಾದ ಪಿ.ವಾದಿರಾಜ ಆಚಾರ್ಯ, ಪಿ.ಶ್ರೀನಿವಾಸ ಆಚಾರ್ಯ, ಪಿ.ಲಾತವ್ಯಆಚಾರ್ಯ, ಪಿ.ವೃಜನಾಥ ಆಚಾರ್ಯ, ಬಂಧುಗಳಾದ ಪ್ರಹ್ಲಾದ ಆಚಾರ್ಯ ಸೊಂಡೂರು, ಅಕ್ಷೋಭ್ಯ ಆಚಾರ್ಯ, ಅರ್ಜುನ ಆಚಾರ್ಯ, ಹರೀಶ ಜೋಯಿಸ್, ಲಕ್ಷ್ಮೀಶ ಜೋಯಿಸ್, ಡಾ!ವ್ಯಾಸರಾಜ ತಂತ್ರಿ ಹಾಗೂ ಪುನರೂರು ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಶ್ರೀಪಾದರ ಆರಾಧನಾ ಪ್ರಯುಕ್ತ
ಬೆಂಗಳೂರಿನಲ್ಲಿರುವ ಶ್ರೀಪಾದರ ಶಿಷ್ಯ ಗುರುರಾಜ ಆಚಾರ್ಯ ಇವರು ಪ್ರಾತಃಕಾಲದಲ್ಲಿ ವಾಯುಸ್ತುತಿ ಪುರಶ್ಚರಣೆ ಹೋಮ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಶಿಮಂತೂರಿನ ಶ್ರೀಆದಿಜನಾರ್ದನ ದೇವರಿಗೆ ಪವಮಾನ ಕಲಶಾಭಿಷೇಕ ಈ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.
ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಹುಟ್ಟೂರಾದ ಮಡಾಮಕ್ಕಿಯಲ್ಲಿ ವೇದಮೂರ್ತಿ ಶ್ರೀಕೃಷ್ಣ ಮೂರ್ತಿ ಮಂಜರು ಹಾಗೂ ಶ್ರೀಅನಂತ ತಂತ್ರಿ ಮಡಾಮಕ್ಕಿ ಇವರ ನೇತೃತ್ವದಲ್ಲಿ ಗ್ರಾಮ ದೇವರಿಗೆ ರುದ್ರಾಭಿಷೇಕ ಸಹಿತ ವಿಶೇಷ ಪೂಜೆ ನೆರವೇರಿತು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ