ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿಧಾಯ ಹೇಳಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.

Spread the love
  • Related Posts

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…

    Spread the love

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

    Spread the love

    You Missed

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 20 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 66 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 70 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 21 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 78 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 77 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು