ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿಧಾಯ ಹೇಳಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ