ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ಡಾ. ರಾಜ್​ಕುಮಾರ್​ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್​ ರಾಜ್​ಕುಮಾರ್​​ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಮುನಿರತ್ನ, ರಾಕ್​​ಲೈಕ್​ ವೆಂಕಟೇಶ್​, ಕಿಚ್ಚ ಸುದೀಪ್​, ರವಿಚಂದ್ರನ್​ ಮುಂತಾದವರು ಸ್ಥಳದಲ್ಲಿದ್ದು, ಪುನೀತ್​ಗೆ ಅಂತಿಮ ವಿಧಾಯ ಹೇಳಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್​ ರಾಜ್​ಕಮಾರ್​ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.

Spread the love
  • Related Posts

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

    Spread the love

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    You Missed

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 11 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 49 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 36 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 84 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 42 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 155 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ