![](https://kalanirnayanews.com/wp-content/uploads/2021/10/IMG-20211031-WA0012-1.jpg)
ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.
![](https://103.180.45.14/kalanirnaya1/wp-content/uploads/2021/10/IMG-20211031-WA0013-1.jpg)
![](https://103.180.45.14/kalanirnaya1/wp-content/uploads/2021/10/IMG-20211031-WA0009-1.jpg)
ರಾಜ್ಕುಮಾರ್ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್ಕುಮಾರ್ ಪುತ್ರ ವಿನಯ್ ರಾಜ್ಕುಮಾರ್ ಅವರಿಂದ ಅಂತಿಮ ವಿಧಿವಿಧಾನ ಮಾಡಿಸಲಾಗಿದೆ. ಡಾ. ರಾಜ್ಕುಮಾರ್ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗಿದೆ.
![](https://103.180.45.14/kalanirnaya1/wp-content/uploads/2021/10/IMG-20211031-WA0022-1-1024x586.jpg)
![](https://103.180.45.14/kalanirnaya1/wp-content/uploads/2021/10/IMG-20211031-WA0010-1.jpg)
ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.
![](https://103.180.45.14/kalanirnaya1/wp-content/uploads/2021/10/IMG-20211031-WA0008-1.jpg)
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುನಿರತ್ನ, ರಾಕ್ಲೈಕ್ ವೆಂಕಟೇಶ್, ಕಿಚ್ಚ ಸುದೀಪ್, ರವಿಚಂದ್ರನ್ ಮುಂತಾದವರು ಸ್ಥಳದಲ್ಲಿದ್ದು, ಪುನೀತ್ಗೆ ಅಂತಿಮ ವಿಧಾಯ ಹೇಳಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಂಠೀರವ ಸ್ಟೇಡಿಯಂನಿಂದ ಪುನೀತ್ ರಾಜ್ಕಮಾರ್ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
![](https://103.180.45.14/kalanirnaya1/wp-content/uploads/2021/10/IMG-20211031-WA0011-1.jpg)