ಮಹಾಲಿಂಗೇಶ್ವರ ಸನ್ನಿಧಾನದ ಕಡೆಗೆ ಸೇವಾ ಸಮರ್ಪಣಾ ನಡಿಗೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಜನಸಾಗರ

ಪುತ್ತೂರು: ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ನಡೆದ ಸೇವಾ ಸಮರ್ಪಣಾ ಕಾರ್ಯಕ್ರಮದಲ್ಲಿ “ಪುತ್ತಿಲ ಪರಿವಾರ” ಎಂಬ ಹೊಸ ಸೇವಾ ಪಥದ ಲೋಗೋ ಅನಾವರಣ ಗೊಳಿಸಿದರು.

ಪುತ್ತೂರಿನಲ್ಲಿ ಹಿಂದುತ್ವದ ತತ್ವಸಿದ್ದಾಂತಗಳ ಅಡಿಯಲ್ಲಿ ಸಂಘಟನಾ ಕಾರ್ಯಚಟುವಟಿಕೆಗಳನ್ನು ನಡೆಸಲು ಈ ಸೇವಾ ಪಥವನ್ನು ಹುಟ್ಟು ಹಾಕಲಾಗಿದೆ.

ಅಪಾರ ಸಂಖ್ಯೆಯಲ್ಲಿ ಪುತ್ತಿಲ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದರ್ಭೆ ವೃತ್ತದಿಂದ ಮಹಾಲಿಂಗೇಶ್ವರ ಸನ್ನಿಧಾನದ ವರೆಗೆ ಪಾದಯಾತ್ರೆ ಮೂಲಕ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು ಬಳಿಕ ಮಹಾಲಿಂಗೇಶ್ವರ ದೇವರಿಗೆ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಸೇವಾ ಸಮರ್ಪಣಾ ಕಾರ್ಯಕ್ರಮ ನಡೆಸಲಾಯಿತು.

ಅರುಣ್ ಕುಮಾರ್ ಪುತ್ತಿಲ ರವರು ಮಾತನಾಡುತ್ತಾ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಯಿಂದ , ಹಿರಿಯರ ಆಶೀರ್ವಾದದಿಂದ ಹಾಗೂ ಮುಖ್ಯವಾಗಿ ಎಲ್ಲಾ ಕಾರ್ಯಕರ್ತರ ಪ್ರೀತಿ , ಧೈರ್ಯ , ಶಕ್ತಿಯಿಂದ ಚುನಾವಣಾ ಸಂದರ್ಭದಿಂದ ಹಿಡಿದು ಇಂದಿನ ತನಕ ನನ್ನಲ್ಲಿರುವ ಇಚ್ಛಾ ಶಕ್ತಿ ಕುಗ್ಗದಂತೆ ಕಾಪಾಡಿದ್ದೀರಿ. ಈ ಚುನಾವಣೆಯಲ್ಲಿ ಜನತೆಯೇ ಖರ್ಚು ವೆಚ್ಚ ಬರಿಸಿ ಒಂದು ಹೊಸ ಪರ್ವ ಪ್ರಾರಂಭಿಸಿದ್ದಾರೆ. ಇನ್ನು ಮುಂದೆಯೂ ನಾವೆಲ್ಲರೂ ಸೇರಿ ಇದೇ ಶಕ್ತಿಯಿಂದ ಸಮಾಜಕ್ಕೆ ಸಹಾಯ ಮಾಡುವ, ಕಾರ್ಯಕರ್ತರಿಗೆ ಆಸರೆಯಾಗುವ , ನೊಂದ ಮನಸ್ಸುಗಳಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ “ಪುತ್ತಿಲ ಪರಿವಾರ” ಎಂಬ ಹೊಸ ಸೇವಾ ಪಥವನ್ನು ಪ್ರಾರಂಭ ಮಾಡಲಾಗಿದೆ . ಇದು ಯಾವೂದೇ ರಾಜಕೀಯ ಪಕ್ಷ ಅಥವಾ ಸಂಘಟನೆಯಲ್ಲ. ಇದೊಂದು ಏಕಮನಸ್ಸಿನ ಪರಿವಾರ. ಪಕ್ಷಾತೀತವಾಗಿ ಹಿಂದೂಗಳ ನೋವು, ನಲಿವು, ಕಷ್ಟ, ಸುಖಗಳಲ್ಲಿ ಭಾಗಿಗಳಾಗೋಣ. ಯಾವೂದೇ ಅಪಪ್ರಚಾರಗಳಿಗೂ ಕಿವಿ ಕೊಡಬೇಡಿ.ನಿಮ್ಮೆಲ್ಲರ ಪ್ರೀತಿ , ವಿಶ್ವಾಸ ಮತ್ತು ಆಶೀರ್ವಾದ ಇನ್ನು ಮುಂದೆಯೂ ಹೀಗೆ ಇರಲಿ ಎಂದರು. ಜನಸೇವೆಗಾಗಿ ಪುತ್ತಿಲ ಪರಿವಾರ ಎಂಬ ವೇದಿಕೆ ಕಟ್ಟಿಕೊಂಡಿದ್ದೇವೆ. ಇದು ಯಾವುದಕ್ಕೂ ಪರ್ಯಾಯ ಅಲ್ಲ. ವೇದಿಕೆಯ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ಮಾರ್ತಾ ಮತ್ತು ಕಾರ್ಯದರ್ಶಿಯಾಗಿ ಉಮೇಶ್ ಗೌಡ ವೀರಮಂಗಲ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಮತದಾರರೇ ಹಣ ನೀಡಿ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿದ್ದು‌ ವಿಚಿತ್ರ ಘಟನೆ, ಅವಮಾನ ಮಾಡಿದವರಿಗೂ ಗುರುತಿಸಿ ಗೌರವಿಸುವ ಹಿಂದೂ ಸಭ್ಯತೆಗೆ ಸೇರಿದವರು ನಾವು ಎಂದು ಸೇವಾ ಸಮರ್ಪಣಾ ಕಾರ್ಯಕರ್ತರ ಸಭೆಯಲ್ಲಿ ಶ್ರೀಕೃಷ್ಣ ಉಪಾಧ್ಯಾಯ ಶುಭನುಡಿಗಳನ್ನಾಡಿದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 2 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 4 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 10 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ