ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ