ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

Spread the love
  • Related Posts

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ…

    Spread the love

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    ಬಂಟ್ವಾಳ: ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆ ಯಾಗಬೇಕೆಂದು ಆಗ್ರಹಿಸಿ ಬಿಸಿ ರೋಡ್ ನಲ್ಲಿ ಗುರುವಾರ ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು. ಬಂಟ್ವಾಳದ ಹಿರಿಯ ವಕೀಲರು ಹಾಗೂ ವಕೀಲರ ಸಂಘ (ರಿ),…

    Spread the love

    You Missed

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 28 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 175 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 83 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 60 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 30 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 25 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ