ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 170 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 39 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 101 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ