ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 4 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 13 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 11 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 16 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ