ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆಯನ್ನು 19 ಕ್ಕೇರಿಸಿದರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದ ಮೊದಲ ಸೆಟ್ ಅನ್ನು ಪಿವಿ ಸಿಂಧು 21-15 ಅಂತರದಿಂದ ಗೆದ್ದುಕೊಂಡರು. ಇನ್ನು 2ನೇ ಸೆಟ್​ನಲ್ಲಿ ಆರಂಭದಲ್ಲೇ 6-3 ಅಂತರದಿಂದ ಮುನ್ನಡೆ ಕಾಯ್ದುಕೊಂಡ ಭಾರತೀಯ ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅಷ್ಟೇ ಅಲ್ಲದೆ ಮಿಶೆಲ್ 6 ಪಾಯಿಂಟ್ ಕಲೆಹಾಕುವ ವೇಳೆಗೆ ಸಿಂಧು 12 ಪಾಯಿಂಟ್ ಗಳಿಸಿದ್ದರು.ಆದರೆ ಇದಾದ ಬಳಿಕ ಕಂಬ್ಯಾಕ್ ಮಾಡಿದ ಕೆನಡಾ ಆಟಗಾರ್ತಿ ಬ್ಯಾಕ್ ಟು ಬ್ಯಾಕ್ ಪಾಯಿಂಟ್ ಗಳಿಸಿ ಅಂತರವನ್ನು 15-11 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ತಮ್ಮ ಅನುಭವವನ್ನು ತೆರೆದಿಟ್ಟ  ಪಿವಿ ಸಿಂಧು ಎದುರಾಳಿ ಮೇಲೆ ಒತ್ತಡ ಹೆಚ್ಚಿಸಿದರು. ಅಲ್ಲದೆ  21 – 13 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಮಾಜಿ ವಿಶ್ವ ಚಾಂಪಿಯನ್ ಪಿವಿ ಸಿಂಧು 2014 ಮತ್ತು 2018 ರ ಕಾಮನ್​ವೆಲ್ತ್​ ಆವೃತ್ತಿಗಳಲ್ಲಿ ಕಂಚು ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತಕ್ಕಾಗಿ ಮೂರು ವಿಭಿನ್ನ ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಮಿಫೈನಲ್​ನಲ್ಲಿ ಸಿಂಗಾಪುರದ ಯೆಯೊ ಜಿಯಾ ಮಿನ್ ಅವರನ್ನು 21-19 21-17 ಅಂತರದಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಈ ಬಾರಿಯ ಕ್ರೀಡಾಕೂಟದಲ್ಲಿ ತನ್ನ ತಾಂತ್ರಿಕ ಕುಶಾಗ್ರಮತಿಯನ್ನು ಪ್ರದರ್ಶಿಸಿದ್ದ ಸಿಂಧು ಆರಂಭದಿಂದಲೂ ಪ್ರತಿ ಆಟಗಾರರ ವಿರುದ್ದ ಮೇಲುಗೈ ಸಾಧಿಸುತ್ತಾ ಬಂದಿದ್ದರು.

ಅದರಲ್ಲೂ ಸ್ಟಾರ್ ಆಟಗಾರ್ತಿ ಯೆಯೊ ಜಿಯಾ ಮಿನ್ ಸೆಮಿಫೈನಲ್​ನಲ್ಲಿ ಭಾರೀ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ಪರಿಪೂರ್ಣವಾದ ನೆಟ್ ಶಾಟ್‌ನೊಂದಿಗೆ 19-12 ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎದುರಾಳಿಯ ಫೋರ್‌ಹ್ಯಾಂಡ್ ರಿಟರ್ನ್ ಶಾಟ್ ತಪ್ಪುಗಳನ್ನು ಬಳಸಿಕೊಂಡ ಸಿಂಧುಗೆ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳಿಸುತ್ತಾ ಒತ್ತಡ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಅದರಂತೆ 49 ನಿಮಿಷಗಳ ಕಾದಾಟದಲ್ಲಿ ಅಂತಿಮವಾಗಿ ಯೊಯೊ ಜಿಯಾರನ್ನು 21-19 21-17 ನೇರ ಸೆಟ್​ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಫೈನಲ್​ನಲ್ಲಿ ಮಿಶೆಲ್ ಲಿ ಅವರಿಗೆ ಸೋಲುಣಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 3 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 11 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 12 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ