ಮುಂಜಾನೆಯಿಂದ ತುಂತುರು ಮಳೆ! ರಾಜ್ಯದ ಹಲವೆಡೆ ಮುಂದಿನ 5ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ. ಇಂದಿನ ಭಾರತ್ ಬಂದ್​ನ ನಡುವೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಸತತ 4 ಗಂಟೆಯಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಭಾರತ್​ ಬಂದ್​ಗೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ.

ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 4 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ