ಮುಂಜಾನೆಯಿಂದ ತುಂತುರು ಮಳೆ! ರಾಜ್ಯದ ಹಲವೆಡೆ ಮುಂದಿನ 5ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ. ಇಂದಿನ ಭಾರತ್ ಬಂದ್​ನ ನಡುವೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಸತತ 4 ಗಂಟೆಯಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಭಾರತ್​ ಬಂದ್​ಗೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ.

ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.

Spread the love
  • Related Posts

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆ–ಚಾರ್ಮಾಡಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ, ಈಗಾಗಲೇ ವಿವಿಧ ಸ್ಥಳಗಳಲ್ಲಿ ವೇಗ ಮಿತಿ ಸೂಚಿಸುವ ಫಲಕಗಳನ್ನು ಅಳವಡಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ವಿಶೇಷವಾಗಿ ಚಾರ್ಮಾಡಿ–ಉಜಿರೆ ಮಾರ್ಗದ ಕೆಲವು ಅಂಕುಡೊಂಕಾದ ಹಾಗೂ ಅಪಾಯಕಾರಿ ತಿರುವುಗಳಿರುವ ಪ್ರದೇಶಗಳಲ್ಲಿ ಕೂಡ 100…

    Spread the love

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    ಸಕಲೇಶಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಸಮಾಜದಲ್ಲಿನ ಅತ್ಯಂತ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರು ತಾಲೂಕಿನ ಮಾಗಲು ಕುಂಬ್ರಹಳ್ಳಿಯ ಮಾಸಾಶನ…

    Spread the love

    You Missed

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    • By admin
    • March 31, 2026
    • 32 views
    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    • By admin
    • March 30, 2026
    • 64 views
    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    • By admin
    • March 29, 2026
    • 278 views
    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 121 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 81 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 32 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ