ಮುಂಜಾನೆಯಿಂದ ತುಂತುರು ಮಳೆ! ರಾಜ್ಯದ ಹಲವೆಡೆ ಮುಂದಿನ 5ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ. ಇಂದಿನ ಭಾರತ್ ಬಂದ್​ನ ನಡುವೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಸತತ 4 ಗಂಟೆಯಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಭಾರತ್​ ಬಂದ್​ಗೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ.

ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.

Spread the love
  • Related Posts

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…

    Spread the love

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ಬೆಳ್ತಂಗಡಿ: ಮುಂಡಾಜೆ ಭಾಗದಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಹಳೆಯ ಬಸ್ ತಂಗುದಾಣಗಳನ್ನು ತೆರವುಗೊಳಿಸಲಾಗಿತ್ತು. ಬಳಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆದ್ದಾರಿ ಬದಿಯಲ್ಲಿ ತಾತ್ಕಾಲಿಕ ರೀತಿಯಲ್ಲಿ ತಗಡು ಶೀಟಿನಿಂದ ಹೊಸ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಆದರೆ ಈ ತಂಗುದಾಣಗಳ ಗುಣಮಟ್ಟ ಇದೀಗ ಸಾರ್ವಜನಿಕರ…

    Spread the love

    You Missed

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 15 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 31 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 17 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    • By admin
    • May 7, 2026
    • 10 views
    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    • By admin
    • May 6, 2026
    • 17 views
    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    • By admin
    • May 6, 2026
    • 31 views
    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ