ಮುಂಜಾನೆಯಿಂದ ತುಂತುರು ಮಳೆ! ರಾಜ್ಯದ ಹಲವೆಡೆ ಮುಂದಿನ 5ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ. ಇಂದಿನ ಭಾರತ್ ಬಂದ್​ನ ನಡುವೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಸತತ 4 ಗಂಟೆಯಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಭಾರತ್​ ಬಂದ್​ಗೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ.

ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.

Spread the love
  • Related Posts

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

    Spread the love

    You Missed

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 25 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 48 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 34 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 31 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 68 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 236 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ