ಮುಂಜಾನೆಯಿಂದ ತುಂತುರು ಮಳೆ! ರಾಜ್ಯದ ಹಲವೆಡೆ ಮುಂದಿನ 5ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ. ಇಂದಿನ ಭಾರತ್ ಬಂದ್​ನ ನಡುವೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಳಗ್ಗೆಯಿಂದ ಸತತ 4 ಗಂಟೆಯಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಭಾರತ್​ ಬಂದ್​ಗೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ.

ಬೆಂಗಳೂರಿನ ದಾಸರಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ, ಬಸವನಗುಡಿ, ಚಾಮರಾಜಪೇಟೆ, ಮೈಸೂರು ರಸ್ತೆ, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ಮುಂಜಾನೆಯಿಂದಲೇ ವರುಣನ ಸಿಂಚನವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.

Spread the love
  • Related Posts

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ಮಂಗಳೂರು, ಜುಲೈ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು…

    Spread the love

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೋಮವಾರ (ಜು.06) ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜು.07) ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಹತ್ತಿರ ಈ ಘಟನೆ ನಡೆದಿದ್ದು,…

    Spread the love

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    • By admin
    • July 7, 2026
    • 49 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 319 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 70 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 112 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    • By admin
    • July 5, 2026
    • 111 views
    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 60 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ