ರಾಮಮಂದಿರ ನಿರ್ಮಾಣ ಭೂಮಿ ಪೂಜೆ, ಕರಾವಳಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ, ಪೇಜಾವರ ಶ್ರೀ ಗಳಿಗೆ ಆಹ್ವಾನ

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದ್ದು, ಭರ್ಜರಿ ಸಿದ್ದತೆಗಳು ಜರುಗುತ್ತಿವೆ. ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ನಾನಾ ರಾಜ್ಯಗಳಿಂದ ಗಣ್ಯರನ್ನು ಆಹ್ವಾನಿಸುತ್ತಿದ್ದು, ಕರ್ನಾಟಕದ ಎಂಟು ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಆಹ್ವಾನಿಸಲಾದ ಎಂಟು ಮಂದಿ ವಿಶೇಷ ಆಹ್ವಾನಿತರ ಪಟ್ಟಿ ಇಲ್ಲಿದೆ.

  1. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
  2. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ,
  3. ಇಸ್ಕಾನ್ ನ ಮಧುಪಂಡಿತ ದಾಸ್,
  4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ,
  5. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ,
  6. ಸುತ್ತೂರು ಮಠದ ಶ್ರೀಗಳು,
  7. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
  8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ ಅಹ್ವಾನ ಪಡೆದ ಪ್ರಮುಖರಾಗಿದ್ದಾರೆ.

ಈಗಾಗಲೇ ರಾಜ್ಯದ ಎಲ್ಲಾ ನದಿಗಳು ಮತ್ತು ಧಾರ್ಮಿಕ ಸ್ಥಳಗಳಿಂದ ಅಯೋಧ್ಯೆಗೆ ಜಲ ಮತ್ತು ಮಣ್ಣು ಕಳುಹಿಸಲಾಗಿದೆ. ದೇವಾಲಯದ ಸ್ಥಳವನ್ನು ಪವಿತ್ರಗೊಳಿಸಲು ಜಲವನ್ನು ಬಳಸಲಾಗುತ್ತದೆ ಎಂದು ವಿಶ್ವಹಿಂದೂ ಪರಿಷತ್‍ ಪ್ರಚಾರ ಪ್ರಮುಖ್ ಬಸವರಾಜ್ ಹೇಳಿದ್ದಾರೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಾವೇರಿ ಮತ್ತು ಕಪಿಲಾ ನದಿಗಳ ಜಲ ಕಳುಹಿಸಿದ್ದಾರೆ. ಧರ್ಮಸ್ಥಳ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ನೇತ್ರಾವತಿ ನದಿಯಿಂದ ನೀರನ್ನು ಕಳುಹಿಸಿದರೆ, ಶೃಂಗೇರಿ ಮಠದ ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಅವರು ತುಂಗಾ, ಭದ್ರಾವತಿ ಮತ್ತು ಶರಾವತಿ ಜಲವನ್ನು ಕಳುಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಕೃಷ್ಣಾ, ಭೀಮ, ಮಲಪ್ರಭ ಮತ್ತು ಘಟಪ್ರಭದಂತಹ ಎಲ್ಲಾ ಪ್ರಮುಖ ನದಿಗಳಿಂದ ವಿವಿಧ ಮಠಾಧೀಶರು ಜಲವನ್ನು ಸಂಗ್ರಹಿಸಿ ಕಳುಹಿಸಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ಉಡುಪಿಯಲ್ಲಿನ ಶ್ರೀ ಕೃಷ್ಣ ದೇವಸ್ಥಾನ, ಚಿಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ದೇವಸ್ಥಾನ, ತುಮಕೂರಿನ ಸಿದ್ದಗಂಗ ಮಠ ಮತ್ತು ದತ್ತ ಪೀಠ ದೇವಾಲಯಗಳಿಂದ ಮಣ್ಣನ್ನು ಕಳುಹಿಸಲಾಗಿದೆ ಎಂದು ಬಸವರಾಜ್ ಹೇಳಿದ್ದಾರೆ.

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 9 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2304 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 605 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 234 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 51 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ