RBI ಆರ್ಥಿಕ ನೀತಿ ಸಮಿತಿಗೆ ಬೆಳ್ತಂಗಡಿಯ ಡಾ. ಶಶಾಂಕ್ ಬಿಡೆ ಆಯ್ಕೆ

ಮಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಆರ್ಥಿಕ ನೀತಿ ಸಮಿತಿಯ ಸದಸ್ಯರಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಹಿರಿಯ ಸಹಕಾರಿ, ಉಜಿರೆ ರಬ್ಬರ್ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿದ್ದ ಜಿ.ಎನ್.ಬಿಡೆಯವರ ಪುತ್ರ ಡಾ. ಶಶಾಂಕ್ ಬಿಡೆ ಆಯ್ಕೆಯಾಗಿದ್ದಾರೆ.

ಆರ್‌ಬಿಐನ ಮೂವರು ಸದಸ್ಯರ ನೇಮಕವನ್ನು ಕೇಂದ್ರ ಸರ್ಕಾರ ತನ್ನ ಗೆಜೆಟ್ ಅಧಿಸೂಚನೆಯಲ್ಲಿ ಹೊರಡಿಸಿದೆ. ಪ್ರಧಾನಿ ನೇತೃತ್ವದ ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯ (ಎಸಿಸಿ) ಹೆಸರುಗಳಿಗೆ ಅನುಮೋದನೆ ನೀಡಿದೆ.

ಆರ್‌ಬಿಐ ಕಾಯ್ದೆಯ ಪ್ರಕಾರ, ಈ ಮೂವರು ನೂತನ ಸದಸ್ಯರು ನಾಲ್ಕು ವರ್ಷಗಳ ಕಾಲ ಸಮಿತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಮುಂಡಾಜೆಯಲ್ಲಿ ಜನಿಸಿದ್ದ ಶಶಾಂಕ್​ ಭಿಡೆ ಅವರು ಅಲ್ಲಿಯೇ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿದರು. ನಂತರ ಉಜಿರೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರೈಸಿದರು. ತಮ್ಮ ಶಾಲಾ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಓದಿದ್ದು ಭಿಡೆ ಅವರ ಹೆಗ್ಗಳಿಕೆ.

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪಡೆದರು. ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಿಂದ ಎಂಎಸ್ಸಿ ಪಡೆದು, ಅಮೆರಿಕದ ಅಯೋವಾ ಸ್ಟೇಟ್ ಯೂನಿವರ್ಸಿಟಿಯಿಂದ ಕೃಷಿ ಅರ್ಥಶಾಸ್ತ್ರದಲ್ಲಿ ಪಿಎಚ್​ಡಿ ಪಡೆದಿದ್ದದರು. ಆಸ್ಟ್ರೇಲಿಯಾದ ದಕ್ಷಿಣ ಏಷ್ಯಾ ಸಂಶೋಧನಾ ಕೇಂದ್ರ, ರಾಷ್ಟ್ರೀಯ ವಿಶ್ವವಿದ್ಯಾಲಯ, ಕ್ಯಾನ್‌ಬೆರಾದಲ್ಲಿ ಯೋಜನೆಗೆ ಸಂಬಂಧಿಸಿದ ಹುದ್ದೆಯಲ್ಲಿಯೂ ಕೆಲಸ ಮಾಡಿದ್ದಾರೆ. ಟೋಕಿಯೊದ ಇಂಟರ್​ನ್ಯಾಷನಲ್ ಡೆವಲಪ್‌ಮೆಂಟ್‌ನಲ್ಲಿನ ಫೌಂಡೇಷನ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್‌ನಲ್ಲಿ ಕೆಲ ಕಾಲ ವಿಸಿಟಿಂಗ್ ಫೆಲೋಶಿಪ್ ಆಗಿದ್ದರು. ಹಲವು ಶೈಕ್ಷಣಿಕ ನಿಯತಕಾಲಿಕಗಳಲ್ಲಿ ತಮ್ಮ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ‘ಎಕನಾಮಿಟ್ರಿಕ್ಸ್​ ಮಾಡಲ್​ ಫಾರ್ ಇಂಡಿಯಾ’ ಮತ್ತು ‘ಇಂಡಿಯಾ ಸ್ಟೇಟ್ ಎಕನಾಮಿಸ್​’ ಪುಸ್ತಕಗಳಿಗೆ ಸಹ ಬರಹಗಾರರಾಗಿದ್ದಾರೆ.

ಭಿಡೆ ಅವರು ಪ್ರಸ್ತುತ ದೆಹಲಿಯ ಎನ್‌ಸಿಎಇಆರ್‌ನಲ್ಲಿ ಹಿರಿಯ ಸಂಶೋಧನಾ ಸಲಹೆಗಾರರಾಗಿದ್ದಾರೆ. ಕೃಷಿ ಅರ್ಥಶಾಸ್ತ್ರಜ್ಞರಾಗಿ ತರಬೇತಿ ಪಡೆದ ಅವರು ಸ್ಥೂಲ ಆರ್ಥಿಕ ಮಾದರಿ, ಮುನ್ಸೂಚನೆ ಮತ್ತು ಬಡತನದ ವಿಶ್ಲೇಷಣೆಯಿಂದ ಹಿಡಿದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೃಷಿಯವರೆಗೆ ವಿವಿಧ ಅನ್ವಯಿಕ ಅರ್ಥಶಾಸ್ತ್ರ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಕಷ್ಟು ವಿತ್ತೀಯ ಅನುಭವ ಪಡೆದಿದ್ದಾರೆ. ಸಹಜವಾಗಿಯೇ ಕೇಂದ್ರ ಸರ್ಕಾರ ಅವರನ್ನು ಭಾರತೀಯ ರಿಸರ್ವ್​ ಬ್ಯಾಂಕ್​ನ ವಿತ್ತೀಯ ನೀತಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿದೆ.

ಕೆಲ ಕಾಲ ಸಾಮಾಜಿಕ ಲೆಕ್ಕ ಪರಿಶೋಧಕ ಮ್ಯಾಟ್ರಿಕ್ಸ್ ಆಧಾರಿತ ಸಿಜಿಇ ಮಾದರಿಗಳು ಮತ್ತು ಮ್ಯಾಕ್ರೋಕಾನೊಮೆಟ್ರಿಕ್​ನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಎನ್‌ಸಿಎಇಆರ್ ನಡೆಸಿದ ತ್ರೈಮಾಸಿಕ ವ್ಯವಹಾರ ನಿರೀಕ್ಷೆಗಳ ಸಮೀಕ್ಷೆಯನ್ನು ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು. ಬೆಂಗಳೂರಿನ ಇನ್​ಸ್ಟಿಟ್ಯೂಟ್ ಫಾರ್ ಸೋಷಿಯಲ್ ಆ್ಯಂಡ್ ಎಕನಾಮಿಕ್ ಚೇಂಜ್​ನಲ್ಲಿ ಆರ್​ಬಿಐ ಘಟಕದ ಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ಕೆಲಸ ಮಾಡಿದಂತಹ ಅನುಭವ ಅವರಿಗಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 30 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 76 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ