RBI ಆರ್ಥಿಕ ನೀತಿ ಸಮಿತಿಗೆ ಬೆಳ್ತಂಗಡಿಯ ಡಾ. ಶಶಾಂಕ್ ಬಿಡೆ ಆಯ್ಕೆ

ಮಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಆರ್ಥಿಕ ನೀತಿ ಸಮಿತಿಯ ಸದಸ್ಯರಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಹಿರಿಯ ಸಹಕಾರಿ, ಉಜಿರೆ ರಬ್ಬರ್ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿದ್ದ ಜಿ.ಎನ್.ಬಿಡೆಯವರ ಪುತ್ರ ಡಾ. ಶಶಾಂಕ್ ಬಿಡೆ ಆಯ್ಕೆಯಾಗಿದ್ದಾರೆ.

ಆರ್‌ಬಿಐನ ಮೂವರು ಸದಸ್ಯರ ನೇಮಕವನ್ನು ಕೇಂದ್ರ ಸರ್ಕಾರ ತನ್ನ ಗೆಜೆಟ್ ಅಧಿಸೂಚನೆಯಲ್ಲಿ ಹೊರಡಿಸಿದೆ. ಪ್ರಧಾನಿ ನೇತೃತ್ವದ ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯ (ಎಸಿಸಿ) ಹೆಸರುಗಳಿಗೆ ಅನುಮೋದನೆ ನೀಡಿದೆ.

ಆರ್‌ಬಿಐ ಕಾಯ್ದೆಯ ಪ್ರಕಾರ, ಈ ಮೂವರು ನೂತನ ಸದಸ್ಯರು ನಾಲ್ಕು ವರ್ಷಗಳ ಕಾಲ ಸಮಿತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಮುಂಡಾಜೆಯಲ್ಲಿ ಜನಿಸಿದ್ದ ಶಶಾಂಕ್​ ಭಿಡೆ ಅವರು ಅಲ್ಲಿಯೇ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿದರು. ನಂತರ ಉಜಿರೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರೈಸಿದರು. ತಮ್ಮ ಶಾಲಾ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಓದಿದ್ದು ಭಿಡೆ ಅವರ ಹೆಗ್ಗಳಿಕೆ.

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪಡೆದರು. ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಿಂದ ಎಂಎಸ್ಸಿ ಪಡೆದು, ಅಮೆರಿಕದ ಅಯೋವಾ ಸ್ಟೇಟ್ ಯೂನಿವರ್ಸಿಟಿಯಿಂದ ಕೃಷಿ ಅರ್ಥಶಾಸ್ತ್ರದಲ್ಲಿ ಪಿಎಚ್​ಡಿ ಪಡೆದಿದ್ದದರು. ಆಸ್ಟ್ರೇಲಿಯಾದ ದಕ್ಷಿಣ ಏಷ್ಯಾ ಸಂಶೋಧನಾ ಕೇಂದ್ರ, ರಾಷ್ಟ್ರೀಯ ವಿಶ್ವವಿದ್ಯಾಲಯ, ಕ್ಯಾನ್‌ಬೆರಾದಲ್ಲಿ ಯೋಜನೆಗೆ ಸಂಬಂಧಿಸಿದ ಹುದ್ದೆಯಲ್ಲಿಯೂ ಕೆಲಸ ಮಾಡಿದ್ದಾರೆ. ಟೋಕಿಯೊದ ಇಂಟರ್​ನ್ಯಾಷನಲ್ ಡೆವಲಪ್‌ಮೆಂಟ್‌ನಲ್ಲಿನ ಫೌಂಡೇಷನ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್‌ನಲ್ಲಿ ಕೆಲ ಕಾಲ ವಿಸಿಟಿಂಗ್ ಫೆಲೋಶಿಪ್ ಆಗಿದ್ದರು. ಹಲವು ಶೈಕ್ಷಣಿಕ ನಿಯತಕಾಲಿಕಗಳಲ್ಲಿ ತಮ್ಮ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ‘ಎಕನಾಮಿಟ್ರಿಕ್ಸ್​ ಮಾಡಲ್​ ಫಾರ್ ಇಂಡಿಯಾ’ ಮತ್ತು ‘ಇಂಡಿಯಾ ಸ್ಟೇಟ್ ಎಕನಾಮಿಸ್​’ ಪುಸ್ತಕಗಳಿಗೆ ಸಹ ಬರಹಗಾರರಾಗಿದ್ದಾರೆ.

ಭಿಡೆ ಅವರು ಪ್ರಸ್ತುತ ದೆಹಲಿಯ ಎನ್‌ಸಿಎಇಆರ್‌ನಲ್ಲಿ ಹಿರಿಯ ಸಂಶೋಧನಾ ಸಲಹೆಗಾರರಾಗಿದ್ದಾರೆ. ಕೃಷಿ ಅರ್ಥಶಾಸ್ತ್ರಜ್ಞರಾಗಿ ತರಬೇತಿ ಪಡೆದ ಅವರು ಸ್ಥೂಲ ಆರ್ಥಿಕ ಮಾದರಿ, ಮುನ್ಸೂಚನೆ ಮತ್ತು ಬಡತನದ ವಿಶ್ಲೇಷಣೆಯಿಂದ ಹಿಡಿದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೃಷಿಯವರೆಗೆ ವಿವಿಧ ಅನ್ವಯಿಕ ಅರ್ಥಶಾಸ್ತ್ರ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಕಷ್ಟು ವಿತ್ತೀಯ ಅನುಭವ ಪಡೆದಿದ್ದಾರೆ. ಸಹಜವಾಗಿಯೇ ಕೇಂದ್ರ ಸರ್ಕಾರ ಅವರನ್ನು ಭಾರತೀಯ ರಿಸರ್ವ್​ ಬ್ಯಾಂಕ್​ನ ವಿತ್ತೀಯ ನೀತಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿದೆ.

ಕೆಲ ಕಾಲ ಸಾಮಾಜಿಕ ಲೆಕ್ಕ ಪರಿಶೋಧಕ ಮ್ಯಾಟ್ರಿಕ್ಸ್ ಆಧಾರಿತ ಸಿಜಿಇ ಮಾದರಿಗಳು ಮತ್ತು ಮ್ಯಾಕ್ರೋಕಾನೊಮೆಟ್ರಿಕ್​ನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಎನ್‌ಸಿಎಇಆರ್ ನಡೆಸಿದ ತ್ರೈಮಾಸಿಕ ವ್ಯವಹಾರ ನಿರೀಕ್ಷೆಗಳ ಸಮೀಕ್ಷೆಯನ್ನು ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು. ಬೆಂಗಳೂರಿನ ಇನ್​ಸ್ಟಿಟ್ಯೂಟ್ ಫಾರ್ ಸೋಷಿಯಲ್ ಆ್ಯಂಡ್ ಎಕನಾಮಿಕ್ ಚೇಂಜ್​ನಲ್ಲಿ ಆರ್​ಬಿಐ ಘಟಕದ ಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ಕೆಲಸ ಮಾಡಿದಂತಹ ಅನುಭವ ಅವರಿಗಿದೆ.

Spread the love
  • Related Posts

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…

    Spread the love

    You Missed

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 4 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 118 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 187 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 66 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 242 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 194 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ