ಹೈನುಗಾರರಿಗೂ ತಟ್ಟಿದೆ ಕೊರೋನಾ ಸಂಕಷ್ಟ! ನಾಳೆಯಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1 ರೂ. ಕಡಿತ

ಮಂಗಳೂರು: ಕೋವಿಡ್ 19 ಸಮಸ್ಯೆ ಇದೀಗ ಹೈನುಗಾರರಿಗೂ ತಟ್ಟಿದಂತಿದೆ KMF ಜೂನ್. 21 ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1ರೂ ಕಡಿಮೆಯಾಗಲಿದೆ ಎಂದು ದ.ಕ ಹಾಲು ಉತ್ಪಾದಕರ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಹಾಲು ಮಹಾಮಂಡಳಿಗೆ ದಿನವಹಿ 86.73 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದ್ದು, ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಸುಮಾರು ಶೇ.25ರಷ್ಟು ಕುಸಿತವಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟಕ್ಕೆ 39.54 ಲಕ್ಷ ಲೀಟರ್ ಬಳಕೆಯಾಗಿ, ದಿನವಹಿ 47.19 ಲಕ್ಷ ಲೀಟರ್ ಹಾಲು ಹಾಲಿನ ಪುಡಿಯಾಗಿ ಪರಿವರ್ತನೆಯಾಗುತ್ತಿದೆ.

ಒಕ್ಕೂಟದಲ್ಲಿ ಹಾಲು ಶೇಖರಣೆ ಏರಿಕೆಯಾಗಿ, ದಿನವಹಿ 5.0 ಲಕ್ಷ ಕೆಜಿಗೂ ಮೀರಿ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್-19ರ ಸಮಸ್ಯೆಯಿಂದಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.

ಮಾರ್ಚ್ ತಿಂಗಳಲ್ಲಿ ಪ್ರತೀ ಕೆಜಿ ಕೆನೆ ರಹಿತ ಹಾಲಿನ ಪುಡಿಗೆ ರೂ.340/- ಮಾರುಕಟ್ಟೆ ದರ ಇದ್ದು, ಪ್ರಸ್ತುತ ದೇಶದಾದ್ಯಂತ ಹಾಲಿನ ಹುಡಿ ದಾಸ್ತಾನು ಹೆಚ್ಚಳದಿಂದ ಪ್ರತಿ ಕೆಜಿಗೆ ರೂ.160/- ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಕಡಿಮೆಯಾಗುವ ನಿರೀಕ್ಷೆಯಿದೆ. ಮಾರುಕಟ್ಟೆಯಲ್ಲಿ ಬೆಣ್ಣೆಯ ದರ ಗಣನೀಯ ಇಳಿಕೆಯಾಗಿದ್ದು, ಸಪ್ಟೆಂಬರ್ ಅಂತ್ಯಕ್ಕೆ ಒಕ್ಕೂಟದಲ್ಲಿ 9.5 ಲಕ್ಷ ಕೆಜಿ ಹೆಚ್ಚುವರಿ ಬೆಣ್ಣೆ ದಾಸ್ತಾನು ಉಳಿಕೆಯಾಗಲಿದೆ.

ಮಾರುಕಟ್ಟೆಯಲ್ಲಿ ಹೋಟೆಲ್, ರೆಸ್ಟೊರೆಂಟ್, ಕ್ಯಾಂಟಿನ್ ಮತ್ತು ವಿದ್ಯಾ-ಸಂಸ್ಥೆಗಳು ಪೂರ್ಣ ಪ್ರಮಾಣದಲ್ಲಿ ವ್ಯವಹರಿಸದಿರುವುದರಿಂದ ಹಾಗೂ ಶುಭ-ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ಪ್ರವಾಸೋದ್ಯಮ ಸ್ಥಗಿತಗೊಂಡಿರುವುದರಿಂದ ಮಾರುಕಟ್ಟೆ ಏಳು ವರ್ಷಗಳ ಹಿಂದಿನ ಮಾರಾಟಕ್ಕಿಂತಲೂ ಕಡಿಮೆಯಾಗಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ವಾರ್ಷಿಕ ಅಂದಾಜು ರೂ.120 ಕೋಟಿ ವಹಿವಾಟು ಕಡಿಮೆಯಾಗಿ, ಒಕ್ಕೂಟಕ್ಕೆ ಅಂದಾಜು ರೂ.20 ಕೋಟಿ ನಷ್ಟವಾಗುವ ಸಾಧ್ಯತೆಯಿದೆ.

ಜೂನ್ ದಿನವಹಿ 1.22 ಲಕ್ಷ ಕೆಜಿ ಹಾಲನ್ನು ಹಾಲಿನ ಹುಡಿ ಪರಿವರ್ತನೆಗೆ ಕಳುಹಿಸಲಾಗುತ್ತಿದ್ದು, ಪ್ರತಿ ಕೆಜಿ ಹಾಲಿನ ಹುಡಿ ಪರಿವರ್ತನೆಗೆ ರೂ.11.35ರಂತೆ ನಷ್ಟವಾಗಲಿದೆ. 2020 ನೇ ಸಪ್ಟೆಂಬರ್ ಅಂತ್ಯಕ್ಕೆ ಅಂದಾಜು150 ಲಕ್ಷ ಕೆಜಿ ಹಾಲಿನ ಹುಡಿ ಒಕ್ಕೂಟದಲ್ಲಿ ಉತ್ಪಾದನೆಯಾಗಿ ದಾಸ್ತಾನು ಉಳಿಯಲಿದೆ. KMFನ ದಾಸ್ತಾನು ಮಳಿಗೆಗಳಲ್ಲಿ ಪರಿವರ್ತಿತ ಹಾಲಿನ ಪುಡಿ ಮತ್ತು ಬೆಣ್ಣೆ ದಾಸ್ತಾನು ಹೆಚ್ಚಾಗಿದ್ದು, ಶೇಖರಿಸಲು ಸಾಧ್ಯವಾಗದೆ, ಖಾಸಗಿ ದಾಸ್ತಾನು ಮಳಿಗೆಗಳಿಗೆ ದುಬಾರಿ ಬಾಡಿಗೆ ನೀಡಿ ದಾಸ್ತಾನು ಮಾಡಬೇಕಾಗಿದೆ. ಹಾಲಿನ ಹುಡಿ ಮತ್ತು ಬೆಣ್ಣೆ ದಾಸ್ತಾನು ಮಾಡುವುದರಿಂದ ಒಕ್ಕೂಟದ ರೂ.30 ಕೋಟಿ ನಗದು ಹರಿವಿಗೆ ತಡೆಯುಂಟಾಗಿ, ದುಡಿಯುವ ಬಂಡವಾಳದ ಕೊರತೆಯಾಗಲಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಶಾಲೆಗಳ ಪ್ರಾರಂಭ ವಿಳಂಬವಾಗುತ್ತಿರುವುದರಿಂದ, ಕೆನೆಭರಿತ ಹಾಲಿನ ಪುಡಿ ಮಾರಾಟವೂ ಕೂಡಾ ಸಾಧ್ಯವಾಗದೆ, ಹಾಲಿನ ಹುಡಿ ದಾಸ್ತಾನು ಉಳಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಹಾಲಿಗೆ ನಿರಂತರ ಮಾರುಕಟ್ಟೆ ಕಾಯ್ದುಕೊಂಡು ಬರಲು, ಹಾಲು ಉತ್ಪಾದಕರ ಸಹಕಾರದಿಂದ ಒಕ್ಕೂಟಕ್ಕೆ ಉಂಟಾಗುವ ಆರ್ಥಿಕ ನಷ್ಟವನ್ನು ಅಮೂಲ್ ಸಂಸ್ಥೆ ಅನುಸರಿಸುವ ಮಾರ್ಗದಲ್ಲಿ ಸರಿದೂಗಿಸಿಕೊಳ್ಳುವ ಅನಿವಾರ್ಯತೆಯಿದೆ. ಪ್ರಸ್ತುತ ಕೋವಿಡ್-೧೯ ಸಮಸ್ಯೆಯನ್ನು ನಿರ್ವಹಿಸಲು ಕರ್ನಾಟಕ ರಾಜ್ಯದ ಹಾಲು ಒಕ್ಕೂಟಗಳಲ್ಲಿ ಪ್ರತೀ ಲೀಟರಿಗೆ ಕನಿಷ್ಟ ರೂ.2.20 ರಿಂದ ರೂ.4.70ರವರೆಗೆ ಖರೀದಿ ದರವನ್ನು ಕಡಿಮೆ ಮಾಡಲಾಗಿದೆ. ನಮ್ಮ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಾಮರ್ಶಿಸಿ, ಕರ್ನಾಟಕ ರಾಜ್ಯದಲ್ಲಿ ಒಕ್ಕೂಟವು ಹಾಲು ಉತ್ಪಾದಕರಿಗೆ ಗರಿಷ್ಟ ದರವನ್ನು ಪಾವತಿಸುವ ಹೆಗ್ಗಳಿಕೆಯನ್ನು ಕಾಯ್ದುಕೊಂಡಿದ್ದು, ಪ್ರಸ್ತುತ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಜೂನ್. 21ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1 ರೂ. ಕಡಿಮೆ ಮಾಡಲಾಗಿದೆ. ಮಾನ್ಯ ಹಾಲು ಉತ್ಪಾದಕರು ಎಂದಿನಂತೆ ಉತ್ತಮ ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಿ, ಸಹಕರಿಸಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 46 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 34 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 34 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 31 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 40 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 35 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ