ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ‘ರೆಮ್ ಡೆಸಿವಿರ್’ ದರ ಇಳಿಕೆ

ನವದೆಹಲಿ: ಕೋವಿಡ್-19 ರೋಗಿಗಳಿಗೆ ಜೀವರಕ್ಷಕ ವಾಗಿರುವ ರೆಮ್ ಡೆಸಿವಿರ್ ನ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ಕೇಂದ್ರ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ ಸದಸ್ಯ ಸಲಹೆಗಾರ ಡಾ. ವಿನೋದ್ ಕೊತ್ವಾಲ್ ಅವರು ಶನಿವಾರ ಈ ಡ್ರಗ್ ಇಂಜೆಕ್ಷನ್ ನ ಬೆಲೆಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಇನ್ನು ಯಾವುದರ ಬೆಲೆ ಎಷ್ಟು?!

ಆ್ಯಂಟಿ ವೈರಲ್ ಔಷಧಿಯನ್ನು 899 ರೂಪಾಯಿಗೆ ಮಾರಾಟ ಮಾಡಲಾಗುತ್ತದೆ.

ಕ್ಯಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ REMDAC 2,800 ರೂ.ನಿಂದ 899 ರೂ. ವರೆಗೆ

ಸಿಂಜೀನ್ ಇಂಟರ್ನ್ಯಾಷನಲ್ ಲಿಮಿಟೆಡ್(ಬಯೋಕಾನ್ ಬಯೋಲಾಜಿಕ್ಸ್ ಇಂಡಿಯಾ) ರೆಮೈನ್ 3,950 ರೂ.ನಿಂದ 2,450 ರೂ.

ಡಾ. ರೆಡ್ಡಿಸ್ ಲ್ಯಾಬೊರೇಟರೀಸ್ ಲಿಮಿಟೆಡ್ ರೆಡಿಎಕ್ಸ್ 5,400 ರೂ.ನಿಂದ 2,700 ರೂ.ಗೆ

ಸಿಪ್ಲಾ ಲಿಮಿಟೆಡ್ ಸಿಪ್ರೆಮಿ 4,000 ರೂ.ನಿಂದ 3,000 ರೂ.ವರೆಗೆ

ಮೈಲಾನ್ ಫಾರ್ಮಾಸ್ಯುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಡೆಸೆಮ್ 4,800 ರೂ.ನಿಂದ 3,400 ರೂ.ವರೆಗೆ

ಜುಬಿಲೆಂಟ್ ಜೆನೆರಿಕ್ಸ್ ಲಿಮಿಟೆಡ್ ಜುಬಿ-ಆರ್ 4,700 ರೂ.ನಿಂದ 3,400 ರೂ. ಗೆ

ಹೆಟೆರೊ ಹೆಲ್ತ್ ಕೇರ್ ಲಿಮಿಟೆಡ್ COVIFOR 5,400 ರೂ.ನಿಂದ 3,490 ರೂ.ಗೆ ಇಳಿಕೆಯಾಗಿದೆ.

ದೇಶದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಹೋರಾಡುತ್ತಿದ್ದಂತೆ ಇಂಜೆಕ್ಷನ್ ತಯಾರಕರು ಆಂಟಿ-ವೈರಲ್ ಡ್ರಗ್ ರೆಮ್ ಡೆಸಿವಿರ್ ಕೊರತೆಯ ಮಧ್ಯೆ ಕೂಡ ಮಾನವೀಯವಾಗಿ ಯೋಚಿಸಿ ಬೆಲೆಯನ್ನು ಕಡಿತಗೊಳಿಸಿದ್ದಾರೆ. ಉತ್ಪಾದನೆ ಮತ್ತು ಪೂರೈಕೆಯ ಹೆಚ್ಚಳ ಮತ್ತು ರೆಮ್ ಡೆಸಿವಿರ್ ಚುಚ್ಚುಮದ್ದಿನ ಬೆಲೆಯನ್ನು ಕಡಿಮೆ ಮಾಡಲು ಚರ್ಚಿಸಲು ಕೇಂದ್ರವು ಅಸ್ತಿತ್ವದಲ್ಲಿರುವ ಎಲ್ಲಾ ಔಷಧ ತಯಾರಕರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಆಂಟಿ-ವೈರಲ್ ಔಷಧ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾಗಿದೆ. ಕೇಂದ್ರವು ಏಪ್ರಿಲ್ 11 ರಂದು ರೆಮ್ ಡೆಸಿವಿರ್ ಮತ್ತು ಇತರೆ ಸಕ್ರಿಯ ಔಷಧ ಪದಾರ್ಥಗಳ ರಫ್ತು ನಿಷೇಧಿಸಿತ್ತು. ಕೊರೋನಾ ಪರಿಸ್ಥಿತಿ ಸುಧಾರಿಸುವವರೆಗೆ ರೆಮ್ ಡೆಸಿವಿರ್ ಇಂಜೆಕ್ಷನ್ ಮತ್ತು ರೆಮ್ ಡೆಸಿವಿರ್ ಆಕ್ಟಿವ್ ಫಾರ್ಮಾಸ್ಯುಟಿಕಲ್ ಪದಾರ್ಥಗಳ ರಫ್ತು ನಿಷೇಧ ಜಾರಿಯಲ್ಲಿರಲಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ