“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಶಾಸಕರು ಇದ್ಯಾವೊದೋ ಆಕಸ್ಮಿಕವಾಗಿ ಬಂದಿರುವ ಕೂಸು ಎಂದು ವ್ಯಂಗ್ಯವಾಡಿದರು. ಹಾಸನ ಜಿಲ್ಲೆಯಲ್ಲಿ ೧೯೬೨ನೆ ಸಾಲಿನಿಂದ ದೇವೆಗೌಡರು ಸೋಲು ಗೆಲುವು ನೋಡಿದ್ದಾರೆ. ಮಾಜಿ ಶಾಸಕ ದಿವಂಗತ. ಹೆಚ್.ಎಸ್. ಪ್ರಕಾಶ್ ರನ್ನು ಹಾಸನ ಜನತೆ ೪ ಬಾರಿ ಗೆಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೊಸ ಕೆಲಸ ವಿಮಾನ ನಿಲ್ದಾಣ ಕಾಮಗಾರಿ ಮಾಡಲಿ, ೧೦೦ ಕೋಟಿ ವೆಚ್ಚದ ಜಿಲ್ಲಾ ಕೋರ್ಟ್ ಸ್ಥಾಪಿಸಿದ್ದೇನೆ. ಕೆಲವರು ಹಾಸನ, ಮಂಡ್ಯ ಬಜೆಟ್ ಎಂದು ಚಪ್ಪಾಳೆ ತಟ್ಟಿದವರು ಹಾಸನದಲ್ಲಿ ಯಾವ ಇಲಾಖೆಯಲ್ಲಿ ಲೂಟಿ ನಡೆಯುತ್ತಿದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ನಮ್ಮ ಕೈಯಲ್ಲಿ ಚಿನ್ನದ ಲೇಪನ ಮಾಡಲು ಆಗಲಿಲ್ಲ ಅವರೇ ಲೇಪನ ಮಾಡಲಿ ಎಂದ ಅವರು, ನಾನು ಕಟ್ಟಿರುವ ನರ್ಸಿಂಗ್ ಶಾಲೆ ಮತ್ತು ಕಟ್ಟಡಗಳಿಗೆ ಬಣ್ಣ ಹೊಡೆಯಲಿ ಎಂದು ಟಾಂಗ್ ನೀಡಿದರು. ಪ್ರೀತಂ ಜೆ. ಗೌಡ ಆರೋಪಕ್ಕೆ ನಾನು ಉತ್ತರ ನೀಡುವುದಿಲ್ಲ ಉತ್ತರ ನೀಡಿದ್ದರೆ ಪೊಳ್ಳೆದು ಹೊಗುತ್ತೇನೆ. .ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರ ಸಮಯ ಬಂದಾಗ ಹೇಳುತ್ತೆನೆ ಚನ್ನಪಟ್ಟಣ ಕೆರೆ ಎಂಗೆ ಮಾಡಿಸುವುದು ನನಗೆ ಗೊತ್ತಿದೆ. ಹಾಸನ ಹೈಟೆಕ್ ಬಸ್ಸು ನಿಲ್ದಾಣ ಮಾಡಲು ರೇವಣ್ಣ ಬರಬೇಕಿತ್ತಾ, ಹಾಸನ ತಾಲ್ಲೂಕು ರಸ್ತೆ ಅಭಿವೃದ್ಧಿಗೆ ೧೫೦ ಕೋಟಿ ಹಣ ನೀಡಿದ್ದೇನೆ ಎಂದು ಜೆಡಿಎಸ್ ಆಡಳಿತವಧಿಯ ಅಭಿವೃದ್ಧಿ ಕೆಲಸದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಸಾಧನೆ ಎನು? ಅವರ ಕೊಡುಗೆ ಬಗ್ಗೆ ತಿಳಿಸಲಿ? ಎಂದು ಪ್ರಶ್ನಿಸಿದ ಅವರು, ನಾವು ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರು ಮಾಡಿದ ಕೆಲಸವನ್ನು ಈಗ ತಡೆ ಹಿಡಿದಿದ್ದಾರೆ. ಹಾಸನ ಬೇಲೂರು ರಸ್ತೆ ಯಡೆಗೌಡನಹಳ್ಳಿ ಬಿಳಿಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ . ತಡೆಹಿಡಿದ ಕಾಮಗಾರಿಗಳು ಸದನದಲ್ಲಿ ಅಂಗಿಕಾರವಾಗಿ ಬಡ್ಜೆಟ್ ನಲ್ಲಿ ಬಂದ ಕಾಮಗಾರಿಗಳು ಅವುಗಳನ್ನು ತಡೆ ಹಿಡಿಯಲು ಸಾಧ್ಯವಿಲ್ಲ. ಈ ಜಿಲ್ಲೆಗೆ ಬಿಜೆಪಿ ಸರ್ಕಾರದ ಸಾಧನೆ ಏನು? ಗಡ್ಕರಿ ಅವರು ಫೌಂಡೇಶನ್ ಹಾಕಿದ್ದ ನೂತನ ಹೆದ್ದಾರಿಯನ್ನು ನಿಲ್ಲಿಸಿದರು. ಮಂತ್ರಿಯಾದವರು ಸರಿಯಾಗಿ ಮಾಹಿತಿ ಪಡೆದು ಹೇಳಿಕೆ ನೀಡಬೇಕು ಎಂದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 65 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ